ದಾವಣಗೆರೆ: ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್16-ಎಸ್ಜೆಮ್ ಮಾರ್ಗದ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಇಂದು (ಫೆ.04) ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕೊಂಡಜ್ಜಿ ರಸ್ತೆ, ಎಸ್ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್ಎಮ್ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್ ಟಿಓ ಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಕಾಡಜ್ಜಿ ವಿದ್ಯುತ್ ವಿತರಣಾ ಕೇಂದ್ರದ ಎಫ್-4 ಶ್ರೀರಾಮ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.04 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕಾಡಜ್ಜಿ, ನಾಗರಕಟ್ಟೆ, ರಾಂಪುರ, ಬಸವನಾಳ್, ಬಸವನಾಳ್ ಗೊಲ್ಲರಹಟ್ಟಿ, ಬೇತೂರು, ಪುಟ್ಟಗನಾಳ್ ಮತ್ತು ರೆಡ್ಡಿ ಕ್ಯಾಂಪ್ ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



