ದಾವಣಗೆರೆ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಗೆ 23 ಕೋಟಿ ರೂ. ಅನುದಾನ; ಜಿ.ಎಂ.ಸಿದ್ದೇಶ್ವರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ನಬಾರ್ಡ್ ಆರ್.ಐ.ಡಿ.ಎಫ್ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಕೃಷಿ ಇಲಾಖೆಯಿಂದ ಸುಮಾರು ರೂ.23 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಅವರು ತಿಳಿಸಿದ್ದಾರೆ.

ಸಮಗ್ರ ಕೃಷಿ ಪದ್ದತಿಯನ್ನು ಉತ್ತೇಜಿಸುವ ಹಾಗೂ ಜನಪ್ರಿಯಗೊಳಿಸುವ ಉದ್ದೇಶದಿಂದ ಆವರಗೆರೆಯಲ್ಲಿ ಉತ್ಕೃಷ್ಟತಾ ಕೇಂದ್ರ (ಸೆಂಟರ್ ಆಫ್ ಎಕ್ಸಲೆನ್ಸ್) ಹಾಗೂ ಕಾಡಜ್ಜಿಯಲ್ಲಿ ಸಂಶೋಧನಾ ಕೇಂದ್ರ ತೆರೆಯಲು ರೂ.4.00 ಕೋಟಿ. ಹೆಚ್ಚು ತರಕಾರಿ ಬೆಳೆಗಳನ್ನು ಬೆಳೆಯುವ ದಾವಣಗೆರೆ ತಾಲ್ಲೂಕಿಗೆ ಶೀಥಲೀಕರಣ ಘಟಕದ ಅವಶ್ಯಕತೆ ಹೆಚ್ಚಾಗಿದ್ದು, ಇದನ್ನು ಮನಗಂಡು ಶೀಥಲೀಕರಣ ಘಟಕಕ್ಕೆ ಸಂಸದರಿಂದ ಮನವಿ ಸಲ್ಲಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ದಾವಣಗೆರೆ ತಾಲ್ಲೂಕಿನ ಆವರೆಗೆರೆ ಕೋಲ್ಡ್ ಸ್ಟೋರೇಜ್ (ಶೀಥಲೀಕರಣ ಘಟಕ) ನಿರ್ಮಾಣ ಮಾಡಲು ರೂ.9.50 ಕೋಟಿ ಅನುದಾನ ಮಂಜೂರಾಗಿದೆ. ಹೊನ್ನಾಳಿ ತಾಲ್ಲೂಕಿನ ಹೆಚ್.ಕಡದಕಟ್ಟೆ ಗ್ರಾಮದಲ್ಲಿ ಸಮಗ್ರ ಕೃಷಿ ಪದ್ದತಿ ಉತ್ತೀಜಿಸಲು ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರ ತೆರೆಯಲು 2.17 ಕೋಟಿ ರೂ. ಒದಗಿಸಲಾಗಿದೆ. ಉಳಿದಂತೆ ಕಾಡಜ್ಜಿಯಲ್ಲಿರುವ ಬೀಜೋತ್ಪಾದನೆ ಕ್ಷೇತ್ರದ ಬಲವರ್ಧನೆಗಾಗಿ 3.00 ಕೋಟಿ. ಮಾಯಕೊಂಡ ವಿಧಾನಸಭಾ ಕ್ಷೇತ್ರದ ತ್ಯಾವಣಿಗೆ ಬೀಜೋತ್ಪಾದನೆ ಕ್ಷೇತ್ರದ ಬಲವರ್ಧನೆಗಾಗಿ 1.50 ಕೋಟಿ, ಜಗಳೂರು ತಾಲ್ಲೂಕಿನ ಚಿಕ್ಕಬಂಟನಹಳ್ಳಿಯಲ್ಲಿರುವ ಬೀಜೋತ್ಪಾದನೆ ಕ್ಷೇತ್ರದ ಬಲವರ್ಧನೆಗಾಗಿ 1.55 ಕೋಟಿ. ಬಸವಾಪಟ್ಟಣ ಮತ್ತು ತ್ಯಾವಣಿಗೆಯಲ್ಲಿ ಹೊಸ ರೈತ ಸಂಪರ್ಕ ಕೇಂದ್ರದ ಕಟ್ಟಡ ನಿರ್ಮಾಣಕ್ಕಾಗಿ ತಲಾ 60 ಲಕ್ಷ ರೂಗಳನ್ನು ಬಿಡುಗಡೆ ಮಾಡಲಾಗಿದೆ.

ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಅನುದಾನ ಒದಗಿಸಿರುವ ಕೇಂದ್ರ ರೈತಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್, ರಾಜ್ಯ ರೈತಕಲ್ಯಾಣ ಸಚಿವರಾದ ಶೋಭಾಕರಂದ್ಲಾಜೆ ಅವರಿಗೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರಿಗೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *