Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಹಾಲು ಉತ್ಪಾದನ ಘಟಕ ಸ್ಥಾಪಿಸಲು ಚಿಂತನೆ

images 47

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ಹಾಲು ಉತ್ಪಾದನ ಘಟಕ ಸ್ಥಾಪಿಸಲು ಚಿಂತನೆ

ಶಿವಮೊಗ್ಗ: ಹಾಲು ಸಾಗಣೆಯ ದರ ಶಿಮುಲ್​ಗೆ ಹೆಚ್ಚಾಗುತ್ತಿರುವುದರಿಂದ ದಾವಣಗೆರೆಯಲ್ಲಿ ಒಂದು ಹಾಲು ಉತ್ಪಾದನಾ ಘಟಕ ಪ್ರಾರಂಭಿಸುವ ಕುರಿತು ಚಿಂತನೆ ಇದೆ ಎಂದು ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ( ಶಿಮುಲ್) ಅಧ್ಯಕ್ಷ ಶ್ರೀಪಾದ್​ ರಾವ್ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಈಗಾಗಲೇ ಜಾಗ ಗುರುತು ಮಾಡಲಾಗಿದೆ‌. ಇಲ್ಲಿ ಹಾಲಿನ ಘಟಕ ಪ್ರಾರಂಭವಾಗುವುದರಿಂದ ಹಾಲನ್ನು‌ ದಾವಣಗೆರೆ ಹಾಗೂ ಚಿತ್ರದುರ್ಗದಿಂದ ತಂದು, ಅದನ್ನು ಮತ್ತೆ ವಾಪಸ್ ಕಳುಹಿಸುವ ಸಾಗಣೆ ವೆಚ್ಚ ಅಧಿಕವಾಗುತ್ತಿರುವುದರಿಂದ ದಾವಣಗೆರೆಯಲ್ಲಿಯೇ ಹಾಲಿನ ಘಟಕವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು. ಸದ್ಯ ಹಾಲಿದ ದರ ಏರಿಕೆ ಮಾಡುವುದರಿಂದ ಶಿಮುಲ್​ಗೆ ಪ್ರತಿ ತಿಂಗಳು 4.5 ಕೋಟಿ ಹೊರೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.

ನಷ್ಟದಲ್ಲಿದ್ದ ಶಿಮುಲ್ ಹಾಲಿ ಲಾಭದ ಹಾದಿಯಲ್ಲಿದೆ. ಮಾರ್ಚ್ ವೇಳೆ ಇದು 6 ರಿಂದ 7 ಕೋಟಿ ರೂ. ಲಾಭಗಳಿಸುವ ನಿರೀಕ್ಷೆ ಇದೆ. ಇದೇ ರೀತಿ ಹಾಲಿನ ದರ ಏರಿಕೆಯನ್ನು ಗ್ರಾಹಕರಿಗೆ ಕಳೆದ ಮೂರು ವರ್ಷಗಳಿಂದ ಮಾಡಿಲ್ಲ, ಹಾಲಿನ ದರ 5 ರೂ. ಮಾಡಬೇಕೆಂದು ಪ್ರಸ್ತಾವನೆಯನ್ನು ಸಿಎಂಗೆ ಕಳುಹಿಸಲಾಗಿದೆ. ದರ ಏರಿಕೆಯ ನಿರೀಕ್ಷೆಯಲ್ಲಿದ್ದೇವೆ ಎಂದು ವಿವರಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top