Connect with us

Dvgsuddi Kannada | online news portal | Kannada news online

ಉಕ್ರೇನ್ ಮೇಲೆ‌ ರಷ್ಯಾ ದಾಳಿ; ಹಾವೇರಿ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿ ಸಾವು

ಪ್ರಮುಖ ಸುದ್ದಿ

ಉಕ್ರೇನ್ ಮೇಲೆ‌ ರಷ್ಯಾ ದಾಳಿ; ಹಾವೇರಿ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿ ಸಾವು

ನವದೆಹಲಿ: ಉಕ್ರೇನ್​​ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ ಭಾರತೀಯರ ಪಾಲಿಗೆ ಆಘಾತಕಾರಿ ಸುದ್ದಿ ಹೊರ ಬಿದ್ದಿದೆ. ಇಂದು ಬೆಳಗ್ಗೆ ಕಾರ್ಕಿವ್‌ನಲ್ಲಿ ನಡೆದ ರಷ್ಯಾದ ಶೆಲ್ ದಾಳಿಗೆ ಭಾರತೀಯ ವೈದ್ಯಕೀಯ ವಿದ್ಯಾರ್ಥಿ ಬಲಿಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ದೃಢಪಡಿಸಿದೆ. ಮೃತ ವಿದ್ಯಾರ್ಥಿ ಹಾವೇರಿ ಜಿಲ್ಲೆಯ ನವೀನ್​ (21) ವೈದ್ಯಕೀಯ ವಿದ್ಯಾರ್ಥಿಯಾಗಿದ್ದು, ರಾಜ್ಯದ ಪಾಲಿಗೆ ಅತ್ಯಂತ ದುಃಖದ ಸಂಗತಿಯಾಗಿದೆ.

ಸಿಎಂ ಬೊಮ್ಮಾಯಿ ಸಾಂತ್ವನ;ಉಕ್ರೇನ್ ನಲ್ಲಿ ಸಾವನ್ನಪ್ಪಿದ ಹಾವೇರಿ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ತಂದೆ ಶೇಖರಗೌಡ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಇದೊಂದು ದೊಡ್ಡ ದುರಂತ. ದೇವರು ನವೀನ್ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ನೀವು ಧೈರ್ಯದಿಂದಿರಿ, ನವೀನ್ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆದಿದೆ. ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಿಎಂ ಸಾಂತ್ವನ ಹೇಳಿದ್ದಾರೆ.

ತಂದೆ ಶೇಖರಗೌಡ ಮಾತನಾಡಿ, ಇಂದು ಮುಂಜಾನೆ ಮಗ ದೂರವಾಣಿ ಕರೆ ಮಾಡಿದ್ದ. ಪ್ರತಿ ದಿನ ಎರಡು ಮೂರು ಬಾರಿ ದೂರವಾಣಿ ಮೂಲಕ ಮಾತಾಡುತ್ತಿದ್ದ ಎಂದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top