ದಾವಣಗೆರೆ: ರಾಜ್ಯದಲ್ಲಿ ಕೋಮು ಸಾಮರಸ್ಯ ಕದಡುತ್ತಿರುವ ಎಸ್ ಡಿ ಪಿ ಐ ಹಾಗೂ ಪಿಎಫ್ ಐ ಸಂಘಟನೆಗಳನ್ನುನಿಷೇಧ ಮಾಡಬೇಕು ಎಂದು ಶ್ರೀ ರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಎರಡು ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿಏಪ್ರಿಲ್ ತಿಂಗಳಿನಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಈ ಸಂಘಟನೆ ಬ್ಯಾನ್ ಮಾಡುವಂತೆ ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಆಡಳಿತ ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿವೆ. ಇದೇ ರೀತಿ ರಾಜ್ಯದ ಬಿಜೆಪಿ ಸರ್ಕಾರ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು.
ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಪಟ್ಟಂತೆ ಸರ್ಕಾರ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕಾಗಿತ್ತು. ಸರ್ಕಾರ ಈ ಕೆಲಸ ಮಾಡದೇ ಕೇವಲ 307 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಗಳನ್ನು ಕೋಕಾ ಕಾಯ್ದೆ ಅಡಿಯಲ್ಲಿ ಗಲ್ಲಿಗೇರಿಸುವಂತೆ ಮನವಿ ಮಾಡಿದರು.
ರಾಜ್ಯದಲ್ಲಿ ನಡೆದ ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟಂತೆ ದಾವಣಗೆರೆ ಜಿಲ್ಲೆಯ ಹರಿಹರ ಮಲೆಬೆನ್ನೂರು ಹಾಗೂ ನಲ್ಲೂರು ಗಳಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆಯಾಗಿದೆ ಆದರೆ ಹಲ್ಲೆಗೊಳಗಾದವರು ಜೈಲಿನಲ್ಲಿದ್ದಾರೆ ಹಲ್ಲೆ ಮಾಡಿದವರು ಜಾಮೀನು ಪಡೆದು ಹೊರಗಿದ್ದಾರೆ. ರಾಜ್ಯಾದ್ಯಂತ ಇದೇ ರೀತಿ ಪ್ರಕರಣಗಳು ನಡೆಯುತ್ತಿದ್ದು ಪೊಲೀಸ್ ಇಲಾಖೆ ಕೂಡ ಒಂದು ಕೋಮಿನ ಪರವಾಗಿ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಣಿ ಸರ್ಕರ್, ಪರಶುರಾಮ್ ನಡುಮನಿ, ವಿನೋದ್ ರಾಜ್, ಶ್ರೀಧರ್, ಆಲೂರು ರಾಜಶೇಖರ್, ವೆಂಕಟೇಶ್, ರಾಹುಲ್ ಇತರರಿದ್ದರು.



