Connect with us

Dvgsuddi Kannada | online news portal | Kannada news online

ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ

ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

ಡಿವಿಜಿ ಸುದ್ದಿ, ದಾವಣಗೆರೆ: ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸಿರುವ  ಪ್ರಾಥಮಿಕ ಹಾಗೂ  ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಜಯದೇವ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಸಚಿವ ಎಸ್. ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾ ಶಂಕರ್ ಪ್ರತಿಕೃತಿ ದಹಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ನ.26 ರಂದು ಸಂವಿಧಾನ ದಿನಾಚರಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ. ಕರಡು ಸಮಿತಿಯಲ್ಲಿನ 299 ಸದಸ್ಯರ ವರದಿ ಜೋಡಣೆ ಮಾಡಿದ್ದಾರೆ ಎಂಬ ಅಂಶ ಪ್ರಸ್ತಾಪಿಸಿರುವುದು ಅತ್ಯಂತ ಖಂಡನೀಯ. ಇದೊಂದು ದೇಶದ್ರೋಹಕ್ಕೆ ಸಮಾನ ಪ್ರಕರಣ. ಸುತ್ತೋಲೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಚಿವ ಸುರೇಶ್ ಕುಮಾರ್ ರಾಜೀನಾಮೆ ನೀಡಬೇಕು. ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಆಯುಕ್ತ ಜಗದೀಶ್ ಅವರನ್ನು ಅಮಾನ ಮಾಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಚಿ.ನಾ. ರಾಮು ಎಂಬುವವರು ದಲಿತ ವಿರೋಧಿ ಮೀಸಲಾತಿ ನಿಲ್ಲಿಸಬೇಕು ಎಂದು ಪ್ರಧಾನಿಗೆ ಪತ್ರ ಬರೆದಿರುವುದಾಗಿ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಹಾಗೆಯೇ  ಬಾಬಾ ರಾಮದೇವ್, ಪೆರಿಯಾರ್ ಮತ್ತು ಅಂಬೇಡ್ಕರ್ ಇಬ್ಬರು ದೇಶದ್ರೋಹಿಗಳು ಎಂದು ಹೇಳಿಕೆ ನೀಡಿದ್ದಾರೆ. ಇವರ ವಿರುದ್ಧವೂ ಸೂಕ್ತ ಕ್ರಮ ತೆಗೆದುಕೊಳ್ಳಬೇಕು  ಎಂದು ಒತ್ತಾಯಿಸಿದರು.

ದಸಂಸ ಸಂಚಾಲಕ ಕುಂದುವಾಡ ಮಂಜುನಾಥ್, ,ದಲಿತ ಹಿರಿಯ ಮುಖಂಡರಾದ ಜಿ.ಎನ್ .ಸತ್ಯಪ್ಪ , ಕೋಗಲೂರು ಕುಮಾರ್,  ವಿಜಯ ಲಕ್ಷ್ಮೀ ,  ಜಿಗಳಿ ಹಾಲೇಶ್, ನಿಟ್ಟೂರು ಕೃಷ್ಣಪ್ಪ, ನಾಗರಾಜ್, ಪರಮೇಶ್ ಪುರದಾಳ್, ಗೋಪನಾಳ್ ಚಂದ್ರು, ಚೌಡಪ್ಪ, ಪ್ರದೀಪ್, ಬೇತೂರು ಹನುಮಂತ, ಮಹಾಂತೇಶ್ ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top