ದಾವಣಗೆರೆ: ಶೆಡ್‌ನಲ್ಲಿದ್ದ ವೃದ್ಧನ ತಲೆಗೆ ಹೊಡೆದು ಬಂಗಾರ, ನಗದು ಕಳವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಹೊಸ ಮನೆ ಕಟ್ಟುವ ಹಿನ್ನೆಲೆ ಸಿಮೆಂಟ್, ಕಬ್ಬಿಣ ಕಾಯಲು ಶೆಡ್ ನಲ್ಲಿ ಉಳಿದುಕೊಂಡಿದ್ದ ವೃದ್ಧನ ತಲೆಗೆ ಹೊಡೆದ ದುಷ್ಕರ್ಮಿಗಳು ಕೈಯಲ್ಲಿದ್ದ ಉಂಗುರ, ಬೇಬಿನಲ್ಲಿದ್ದ ಮೂರು ಸಾವಿರ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.

ತಾಲ್ಲೂಕಿನ ಚಟ್ಟೋಬನಹಳ್ಳಿ ಹೊಸನಗರ ಕ್ಯಾಂಪ್ ನಿವಾಸಿ ರಂಗಸ್ವಾಮಿ (80) ಅವರು ತೋಳಹುಣಸೆ ಗ್ರಾಮದ ಪೆಟ್ರೋಲ್ ಬಂಕ್ ಪಕ್ಕ ಹೊಸ ಮನೆ ನಿರ್ಮಾಣ ಮಾಡುತ್ತಿದ್ದು, ಅದರ ಪಕ್ಕದಲ್ಲಿಯೇ ಶೆಡ್ ನಿರ್ಮಿಸಿ ರಾತ್ರಿ ಅಲ್ಲಿಯೇ ಮಲಗಿಕೊಂಡಿದ್ದರು.

ತಡ ರಾತ್ರಿ ದಾಳಿ ಮಾಡಿದ ದುಷ್ಕರ್ಮಿಗಳು ಹಲ್ಲೆ ಮಾಡಿ ಕೈಯಲ್ಲಿದ್ದ ಉಂಗುರ ಹಾಗೂ ಮೂರು ಸಾವಿರ ನಗದು ದೋಚಿಕೊಂಡು ಹೋಗಿದ್ದಾರೆ. ತಲೆಗೆ ಬಲವಾದ ಹೊಡೆತ ಬಿದ್ದ ಹಿನ್ನೆಲೆ ವೃದ್ಧ ಎಚ್ಚರ ತಪ್ಪಿದ್ದಾರೆ.‌ ಆಗ 25 ಸಾವಿರ ಮೌಲ್ಯದ ಉಂಗುರ, ಮೂರು ಸಾವಿರ ನಗದು ಕಳ್ಳತನ ಮಾಡಿದ್ದಾರೆ. ಬೆಳಗ್ಗೆ ಎಚ್ಚರವಾದಾಗ ತಲೆಯಿಂದ ರಕ್ತ ಸೋರುತ್ತಿತ್ತು. ಕೂಡಲೇ ಅಲ್ಲಿದ್ದ ಸ್ಥಳೀಯರು ವೃದ್ಧನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *