ಬೆಂಗಳೂರು: ರಾಜ್ಯದ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ಬಯೋಮೆಟ್ರಿಕ್ ವರ್ಕ್ ಆಗದ ಕಾರಣ, ಪಡಿತರ ವಿತರಣೆ ನಿಲ್ಲಿಸುವಂತಿಲ್ಲ. ಇನ್ಮುಂದೆ ಬಯೋಮೆಟ್ರಿಕ್ ವರ್ಕ್ ಆಗದೇ ಇದ್ದರೂ ಪಡಿತರ ವಿತರಣೆ ಮಾಡಲಾಗುವುದುವಿಧಾನ ಪರಿಷತ್ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ವಿಧಾನಪರಿಷತ್ತಿನಲ್ಲಿ ಸೋಮವಾರ ಸದಸ್ಯ ಎಸ್ ರವಿ ಪ್ರಶ್ನೆಗೆ ಉತ್ತರಿಸಿದ ಅವರು, ವಯೋವೃದ್ಧರು, ಕಾರ್ಮಿಕರ ಬೆರಳು ಸವೆದು ಬಯೋಮೆಟ್ರಿಕ್ ಪಡೆಯಲು ಸಾಧ್ಯವಾಗುತ್ತಿಲ್ಲ. ಬಯೋಮೆಟ್ರಿಕ್ ಹೊರತುಪಡಿಸಿ, ಪಡಿತರ ವಿತರಣೆ ಮಾಡಲಾಗುತ್ತದೆ. ರಾಜ್ಯದಲ್ಲಿ ಬಯೋಮೆಟ್ರಿಕ್ ಹೊರತುಪಡಿಸಿ ಶೇ.2ರಷ್ಟು ಫಲಾನುಭವಿಗಳಿಗೆ ಪಡಿತರ ಹಂಚಿಕೆಗೆ ಅವಕಾಶವಿದೆ. ಅದನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.



