Connect with us

Dvgsuddi Kannada | online news portal | Kannada news online

ಹಿಜಾಬ್​ ಇಲ್ಲದೆ ಕಾಲೇಜಿಗೆ ಹೋಗಲ್ಲ; ಕುರಾನ್​ ನಮಗೆ ಫೈನಲ್:  ಪ್ರಕರಣ ಕುರಿತು ಹೈಕೋರ್ಟ್​ ಮೆಟ್ಟಿಲೇರಿದ್ದ 6 ವಿದ್ಯಾರ್ಥಿಗಳ ಹೇಳಿಕೆ

ಪ್ರಮುಖ ಸುದ್ದಿ

ಹಿಜಾಬ್​ ಇಲ್ಲದೆ ಕಾಲೇಜಿಗೆ ಹೋಗಲ್ಲ; ಕುರಾನ್​ ನಮಗೆ ಫೈನಲ್:  ಪ್ರಕರಣ ಕುರಿತು ಹೈಕೋರ್ಟ್​ ಮೆಟ್ಟಿಲೇರಿದ್ದ 6 ವಿದ್ಯಾರ್ಥಿಗಳ ಹೇಳಿಕೆ

ಬೆಂಗಳೂರು: ಹಿಜಾಬ್​ ಇಲ್ಲದೆ ನಾವು ಕಾಲೇಜಿಗೆ ಹೋಗಲ್ಲ. ಕುರಾನ್ ಹೇಳಿದ್ದೇ​ ನಮಗೆ ಫೈನಲ್ ಎಂದು  ಹಿಜಾಬ್ ಪ್ರಕರಣ ಕುರಿತು ಹೈಕೋರ್ಟ್​ ಮೆಟ್ಟಿಲೇರಿದ್ದ ಉಡುಪಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 6 ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ಧಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿಗಳು, ಶಾಲಾ-ಕಾಲೇಜುಗಳಿಗೆ ಹಿಜಾಬ್​ ಧರಿಸಿಕೊಂಡು ಹೋಗಲು ಅವಕಾಶ ಕೊಡಬೇಕು. ನಮ್ಮ ಹಕ್ಕಿಗಾಗಿ ಹೋರಾಟ ನಿಲ್ಲುವುದಿಲ್ಲ ಎಂದಿದ್ದಾರೆ. ಕೋರ್ಟ್​ನಲ್ಲಿ ನ್ಯಾಯ ಸಿಗುವ ಭರವಸೆ ಇತ್ತು, ತೀರ್ಪು ವಿರುದ್ಧವಾಗಿ ಬಂದಿದೆ.  ನಾವು ಯಾವುದೇ ಕಾರಣಕ್ಕೂ ಹಿಜಾಬ್​ ಇಲ್ಲದೆ ಕಾಲೇಜಿಗೆ ಹೋಗಲ್ಲ ಎಂದರು.

ಹೆಣ್ಣುಮುಕ್ಕಳು ಮನೆಯಿಂದ ಹೊರಬರುವಾಗ ತಲೆ-ಎದೆಭಾಗವನ್ನು ಮುಚ್ಚಬೇಕು ಎಂದು ಕುರಾನ್​ನಲ್ಲಿದೆ. ನಮಗೆ ಅದೇ ಫೈನಲ್. ರಾಜಕೀಯ ಉದ್ದೇಶಕ್ಕಾಗಿ ಇದನ್ನು ದೊಡ್ಡದು ಮಾಡಲಾಯಿತು. ಕಾಲೇಜಿನ ಕಾಂಪೌಂಡಿನ ಒಳಗೇ ಈ ಸಮಸ್ಯೆಯನ್ನ ಬಗೆಹರಿಸಬಹುದಿತ್ತು ಎಂದರು.

ಸರ್ಕಾರ ಕೋರ್ಟ್ ಮೇಲೆ ಒತ್ತಡ ಹಾಕಿದೆ. ಇದು ಅಸಂವಿಧಾನಿಕವಾದ ತೀರ್ಪು. ನಾವು ಜಾತ್ಯಾತೀತ ದೇಶದಲ್ಲಿದ್ದೇವೆ. ಎಲ್ಲಾ ಧರ್ಮಕ್ಕೆ ಎಲ್ಲರೂ ಗೌರವ ಕೊಡಬೇಕು ಎಂದಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top