Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿ ಮನೆ, ಕಚೇರಿ, ಸ್ವಗ್ರಾಮ ಸಹಿತ ಮೂರು ಏಕಕಾಲದಲ್ಲಿ ಎಸಿಬಿ ದಾಳಿ

ದಾವಣಗೆರೆ

ದಾವಣಗೆರೆ: ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿ ಮನೆ, ಕಚೇರಿ, ಸ್ವಗ್ರಾಮ ಸಹಿತ ಮೂರು ಏಕಕಾಲದಲ್ಲಿ ಎಸಿಬಿ ದಾಳಿ

ದಾವಣಗೆರೆ: ಜಿಲ್ಲೆಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಎಂ.ಎಸ್. ಮಹೇಶ್ವರಪ್ಪ ಅವರ  ಮನೆ, ಕಚೇರಿ, ಸ್ವಗ್ರಾಮ ಸೇರಿ ಮೂರು ಕಡೆ ಬೆಳಗ್ಗೆಯಿಂದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿ, ಅಪಾರ ಪ್ರಮಾಣದ ಸಂಪತ್ತು ಪರಿಶೀಲನೆ ನಡೆಸುತ್ತಿದ್ದಾರೆ.

ವಿದ್ಯಾನಗರದ ಸ್ವಂತ ಮನೆ, ಕಚೇರಿ ಹಾಗೂ  ಚನ್ನಗಿರಿ ತಾಲ್ಲೂಕಿನ ಕಂಸಾಗರದ ಸ್ವಗ್ರಾಮದ ಮನೆ ಮೇಲೆ ಏಕ ಕಾಲದಲ್ಲಿ ದಾಳಿ ನಡೆದಿದೆ.  ಎಸಿಬಿ ಎಸ್ ಪಿ ಜಯಪ್ರಕಾಶ್ ನೇತೃತ್ವದಲ್ಲಿ ಡಿವೈಎಸ್ಪಿ, ಮಂಜುನಾಥ್ ಇನ್ಸ್‌ಪೆಕ್ಟರ್ ಮಧುಸೂದನ್, ರವೀಂದ್ರ, ಚಿತ್ರದುರ್ಗದ ಸುದೀರ್, ಪ್ರವೀಣ್ ಹಾಗೂ ಸಿಬ್ಬಂದಿಗಳು 20 ಕ್ಕೂ ಹೆಚ್ಚು  ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ.

ಜಿಲ್ಲಾ ಪರಿಸರ ಅಧಿಕಾರಿಯಾಗಿರುವ ಮಹೇಶ್ವರಪ್ಪ ಮೂಲ ಚನ್ನಗಿರಿ ತಾಲೂಕಿನ ಕಂಸಾಗರ ಗ್ರಾಮದವರಾಗಿದ್ದಾರೆ. ಮಹೇಶ್ವರಪ್ ದಾವಣಗೆರೆ ಮತ್ತು ಸ್ವಗ್ರಾಮದಲ್ಲಿ ಒಟ್ಟು10 ಮನೆಕ್ಕೂ ಹೆಚ್ಚು ಮನೆಗಳು, 10 ಎಕರೆ ಜಮೀನು,  ಕಾರ್, ಒಂದು ಬೈಕ್ ಪತ್ತೆಯಾಗಿದ್ದು, ಅಪಾರ ಪ್ರಮಾಣದ ಬೆಳ್ಳಿ, ಬಂಗಾರ, ನಗದು ಹೊಂದಿದ್ಧಾರೆ. ಈ ಬಗ್ಗೆ  ಮಹೇಶ್ವರಪ್ಪ ಅವರ  ಆಸ್ತಿಗಳ ದಾಖಲೆಗಳನ್ನು ಅಧಿಕಾರಿಗಳ ತಂಡ ಪರಿಶೀಲಿಸುತ್ತಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top