ನವೀನ್ ಮೃತ ದೇಹ ಸೋಮವಾರ ಹಾವೇರಿಗೆ ಆಗಮನ; ದಾವಣಗೆರೆ ಮೆಡಿಕೆಲ್ ಕಾಲೇಜಿಗೆ ದೇಹ ದಾನಕ್ಕೆ ಫೋಷಕರ ನಿರ್ಧಾರ..!  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರಷ್ಯಾ ಮತ್ತು ಉಕ್ರೇ​ನ್‌​ ನಡುವಿನ ಯುದ್ಧ ಪ್ರದೇಶದಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಎಂಬಿಬಿಎಸ್‌ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ ಸೋಮವಾರ  ಬೆಳಗಿನ ಜಾವ 3 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ನಂತರ ಸ್ವಗ್ರಾಮ ಹಾವೇರಿ ಜಿಲ್ಲೆಯ ಚಳಗೇರಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ನವೀನ್‌ ಮೃತ​ದೇ​ಹ​ವನ್ನು ವೈದ್ಯ​ಕೀಯ ವಿದ್ಯಾ​ರ್ಥಿ​ಗಳ ಉಪಯೋಗಕ್ಕಾಗಿ ದಾವ​ಣ​ಗೆ​ರೆಯ ಎಸ್‌.ಎ​ಸ್‌.​ ಮೆ​ಡಿ​ಕಲ್‌ ಕಾಲೇ​ಜಿಗೆ ನೀಡಲು ಕುಟುಂಬ​ದ​ವರು ನಿರ್ಧರಿಸಿದ್ದಾರೆ.  ಡಾಕ್ಟರ್‌ ಆಗಬೇಕೆಂಬ ಕನಸು ಕಂಡಿದ್ದ ನವೀನ್‌ ಆಸೆ ಈಡೇರಲಿಲ್ಲ. ಕೊನೇ ಪಕ್ಷ ಆತನ ದೇಹ ಮೆಡಿಕಲ್‌ ಓದುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನವೀನ್‌ ತಂದೆ ಶೇಖರಪ್ಪ ಗ್ಯಾನಗೌಡರ ತಿಳಿಸಿದ್ಧಾರೆ

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *