ಹುಬ್ಬಳ್ಳಿ: ಕೇಂದ್ರ ಸರಕಾರ ರಾಜ್ಯಕ್ಕೆ 18 ಲಕ್ಷ ಮನೆಗಳು ಮಂಜೂರಾಗಿದೆ. ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೆ 5 ಲಕ್ಷ ಮನೆ ನಿರ್ಮಿಸಲಾಗಿದೆ. ನಾಲ್ಕು ಲಕ್ಷ ಮನೆಗಳನ್ನು ಗ್ರಾಮೀಣ ಭಾಗಕ್ಕೆ ನೀಡಲಾಗಿದೆ. ಮೂರು ಲಕ್ಷ ಮನೆಗಳನ್ನು ಬಸವ ಯೋಜನೆಯಡಿ ಮಂಜೂರು ಮಾಡಲಾಗಿದೆ. ವಸತಿ ನಿಗಮದಿಂದ ಹಣ ವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ವಸತಿ ಯೋಜನೆ ಲಾಭ ಪಡೆಯವ ಫಲಾನುಭವಿಗಳ ಆದಾಯ ಮಿತಿ ಯನ್ನು 1.20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ವಸತಿ ಇಲಾಖೆ ಯಿಂದ ರಾಜ್ಯದಲ್ಲಿ 6,600 ನಿವೇಶನ ಖರೀದಿಸಿ ಬಡವರಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.



