ಕೆಜಿಎಫ್​ ಚಾಪ್ಟರ್​ 2; ಧೂಳೆಬ್ಬಿಸಿದ ಮೊದಲ ಲಿರಿಕಲ್ ತೂಫಾನ್​ ವಿಡಿಯೋ ಸಾಂಗ್….

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕೆಜಿಎಫ್​: ಚಾಪ್ಟರ್​ 2  ಸಿನಿಮಾದ ತೂಫಾನ್​ ವಿಡಿಯೋ ಹಾಡು ಬಿಡುಗಡೆ ಆಗಿದೆ. ಬಿಡುಗಡೆಯಾದ ಒಂದೇ ತಾಸಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ  ಧೂಳೆಬ್ಬಿಸಿದೆ. ಲಿರಿಕಲ್​ ಸಾಂಗ್​ ನೋಡಿದ ಯಶ್​ ಫ್ಯಾನ್ಸ್ಗಳು ಫುಲ್​ ಖುಷಿಯಾಗಿದ್ದಾರೆ.

ಭಾರೀ ನಿರೀಕ್ಷಿತ ಹುಟ್ಟು ಹಾಕಿರುವ  ಕೆಜಿಎಫ್​ ಚಾಪ್ಟರ್​ 2 ಇಂದು (ಮಾ. 21)  ಬೆಳಗ್ಗೆ 11.07 ಗಂಟೆಗೆ  ಮೊದಲ ಲಿರಿಕಲ್​ ಸಾಂಗ್ ತೂಫಾನ್ ಬಿಡುಗಡೆ ಮಾಡಲಾಗಿದೆ. ಈವರೆಗೆ ಪೋಸ್ಟರ್​ ಮತ್ತು ಒಂದು ಟೀಸರ್​ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಈ ಸಿನಿಮಾ ಈಗ ಮೊದಲ ಸಾಂಗ್​ ಬಿಡುಗಡೆ ಮಾಡಿದೆ.

ಈ ಹಾಡನ್ನು ಬಿಡುಗಡೆ ಮಾಡುವ ಬಗ್ಗೆ ಎರಡು ದಿನ ಮುನ್ನವೇ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ತಿಳಿಸಲಾಗಿತ್ತು. ಆಗಲೇ ಜನರ ನಿರೀಕ್ಷೆ ಮುಗಿಲುಮುಟ್ಟಿತ್ತು. ಆ ನಿರೀಕ್ಷೆಗೆ ತಕ್ಕಂತೆಯೇ  ಚಿತ್ರದಿಂದ ತೂಫಾನ್​  ಹಾಡು ಮೂಡಿಬಂದಿದೆ. ಸಾಂಗ್​ ನೋಡಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

https://www.youtube.com/watch?v=unWiIzY7pSw

ಈ ಹಾಡಿಗೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಹಾಡಿನಲ್ಲಿ ಯಶ್ ಅಭಿನಯ​  ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನದ ಈ ಸಿನಿಮಾ ವಿಶ್ವದಾದ್ಯಂತ ಸಾಕಷ್ಟು ಸುದ್ದಿ ಮಾಡುತ್ತಿದೆ. ​ ಸೃಷ್ಟಿ ಆಗಲು ಹಲವು ಕಾರಣಗಳಿವೆ.

ರಿಲೀಸ್​ ಆದ ಒಂದೇ ತಾಸಿನಲ್ಲಿ ಕನ್ನಡ ವರ್ಷನ್ ತೂಫಾನ್​  ಹಾಡು ಲಕ್ಷಾಂತರ ವೀವ್ಸ್​ ಪಡೆದುಕೊಂಡಿದೆ. ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗಿನಲ್ಲಿಯೂ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಬಿಡುಗಡೆ ಆಗಲಿದೆ. ಆ ಎಲ್ಲ ಭಾಷೆಗಳಲ್ಲೂ ‘ತೂಫಾನ್​’ ಹಾಡಿನ ಲಿರಿಕಲ್​ ವಿಡಿಯೋ ರಿಲೀಸ್​ ಮಾಡಲಾಗಿದೆ. ಎಲ್ಲ ಭಾಷೆಯಲ್ಲೂ ಜನರಿಂದ ಸಖತ್​ ರಿಯಾಕ್ಷನ್​ ಸಿಗುತ್ತಿದೆ.

ಏಪ್ರಿಲ್​ 14ರಂದು ಕೆಜಿಎಫ್​ ಚಾಪ್ಟರ್ 2 ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಸಂಜಯ್​ ದತ್​, ರವೀನಾ ಟಂಡನ್​ ನಟಿಸಿರುವುದರಿಂದ ಬಾಲಿವುಡ್​ ವಲಯದಲ್ಲೂ ಕೆಜಿಎಫ್​ 2 ಚಿತ್ರ ನಿರೀಕ್ಷೆ ಹೆಚ್ಚಿದೆ. ಯಶ್​ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ಪ್ರಕಾಶ್​ ರಾಜ್​, ಮಾಳವಿಕಾ ಅವಿನಾಶ್​,  ರಮೇಶ್​ ಮುಂತಾದ ನಟಿಸಿದ್ದಾರೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *