ಮಳೆಗಾಲದಲ್ಲಿ ಮುಳುಗಡೆಯಾಗದಂತೆ  ಹೊಸ ಪಿಬಿ ರಸ್ತೆ ನಿರ್ಮಾಣ; ಸಚಿವ ನಿತಿನ್‌ ಗಡ್ಕರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಮುಂಬೈ: ಪುಣೆ-ಬೆಂಗಳೂರು (ಪಿ.ಬಿ ರಸ್ತೆ) ನಡುವಿನ ಈಗಿನ ಮಾರ್ಗದ ಬದಲಾಗಿ  ಹೊಸದಾಗಿ  ಸತಾರಾ, ಸಾಂಗ್ಲಿ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮೂಲಕ ಬೆಂಗಳೂರು ತಲುಪುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವುದಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಘೋಷಣೆ ಮಾಡಿದ್ದಾರೆ.

ಹಾಲಿ ಪುಣೆ- ಬೆಂಗಳೂರು ರಸ್ತೆ 775 ಕಿ.ಮೀ. ಉದ್ದವಿದ್ದು, ಮಳೆಗಾಲದಲ್ಲಿ ಮುಳುಗಡೆಯಾಗುತ್ತಿದೆ. ಹೊಸದಾಗಿ ರಸ್ತೆ ಮುಳುಗಡೆಯಾಗದ ರೀತಿಯ  ಹೆದ್ದಾರಿ ನಿರ್ಮಾಣ ಮಾಡಲಾಗುವುದು ಎಂದು ಸಾಂಗ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಹೊಸ ಹೆದ್ದಾರಿ 699 ಕಿ.ಮೀ. ಉದ್ದವಿರಲಿದೆ (ಈಗಿರುವ ರಸ್ತೆಗಿಂತ 76 ಕಿ.ಮೀ. ಕಡಿಮೆ). 40 ಸಾವಿರ ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮೂಲಕ ಬೆಂಗಳೂರಿಗೆ ಸಂಪರ್ಕಿಸಲಿದೆ. ಈಗ ಇರುವ ಸತಾರಾ, ಕೊಲ್ಲಾಪುರ, ಬೆಳಗಾವಿ, ಹುಬ್ಬಳ್ಳಿ, ಹಾವೇರಿ ಮಾರ್ಗದ ಹೆದ್ದಾರಿ ಮೇಲಿನ ಒತ್ತಡವನ್ನು ಹೊಸ ರಸ್ತೆ ತಗ್ಗಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ನೂತನ ಹೆದ್ದಾರಿಯು ಮಹಾರಾಷ್ಟ್ರದ  ಸತಾರಾ ಜಿಲ್ಲೆಯ ಖಂಡಾಲಾ, ಫಲಠಣ, ಖಟಾವ್‌, ಸಾಂಗ್ಲಿ ಜಿಲ್ಲೆಯ ಖಾನಾಪುರ, ತಾಸಗಾಂವ್‌ ಹಾಗೂ ಕವಠೆ ಮಹಾಂಕಾಲ ಮೂಲಕ ಹಾದುಹೋಗಲಿದೆ ಎಂದು ತಿಳಿಸಿದ್ದಾರೆ.

ಈಗ ಇರುವ ರಸ್ತೆ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿದೆ. ಹೊಸ ರಸ್ತೆಯಲ್ಲಿ ಈ ಸಮಸ್ಯೆ ಇಲ್ಲ. ಅಲ್ಲದೆ 76 ಕಿ.ಮೀ. ಅಂತರವೂ ತಗ್ಗಲಿದೆ. ಈಗಿರುವ ರಸ್ತೆ ಮೇಲಿನ ಒತ್ತಡ ಇಳಿಯಲಿದೆ. ಸತಾರಾ, ಸಾಂಗ್ಲಿ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮೂಲಕ ಬೆಂಗಳೂರು ತಲುಪಲಿದೆ.

 ಈಗಿರುವ ಪುಣೆ, ಕೊಲ್ಲಾಪುರ, ಬೆಳಗಾವಿ- ಹುಬ್ಬಳ್ಳಿ- ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮೂಲಕ ಬೆಂಗಳೂರು ಸಂಪರ್ಕಿಸಲು 775 ಕಿ.ಮೀ ದೂರು ಇದೆ. ಹೊಸ ರಸ್ತೆ ನಿರ್ಮಾಣದಿಂದ 699 ಕಿ.ಮೀ ಆಗಲಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *