Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

home
ದಾವಣಗೆರೆ: ವಸತಿ ರಹಿತರಿಗೆ ಆಶ್ರಯ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
guest teacher job
ದಾವಣಗೆರೆ: ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
Morarji Desai school 1
ದಾವಣಗೆರೆ: ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
rain22
ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ; ಕೆಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
rain news 1
ಕರಾವಳಿಗೆ ಎಂಟ್ರಿ ಕೊಟ್ಟ ಮುಂಗಾರು ಮಳೆ; 48 ಗಂಟೆಯಲ್ಲಿ ರಾಜ್ಯ ವ್ಯಾಪಿ ವಿಸ್ತರಣೆ; ಒಂದು ವಾರ ಭಾರೀ ಮಳೆ ಮುನ್ಸೂಚನೆ

Socials

ದಾವಣಗೆರೆ

ಗ್ರಾಮೀಣ ಮಕ್ಕಳ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ:ಎಸ್.ಎ.ರವೀಂದ್ರನಾಥ್

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: November 27, 2019
Share
2 Min Read
SHARE

ಡಿವಿಜಿ ಸುದ್ದಿ, ದಾವಣಗೆರೆ: ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕೆಂದು  ಶಾಸಕ ಎಸ್.ಎ. ರವೀಂದ್ರನಾಥ ಹೇಳಿದರು.

ನಗರದ ಸೋಮೇಶ್ವರ ವಿದ್ಯಾಲಯದಲ್ಲಿ ಆಯೋಜಿಸಿದ್ದ 2019-20ನೇ ಸಾಲಿನ ಬ್ಲಾಕ್ ಹಂತದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

prathibha karanji2

ಶಾಲೆಗಳಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಗುರುತಿಸಲಾಗುತ್ತದೆ. ಆದರೆ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇಂತಹ ಅವಕಾಶಗಳು ಇರುವುದಿಲ್ಲ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಸಹಕಾರಿಯಾಗಲಿದೆ. ವಿವಿಧ ಸಾಂಸ್ಕಂತಿಕ ಕಾರ್ಯಕ್ರಮಗಳು ಮತ್ತು ವೇಷ ಭೂಷಣ ಸ್ಪರ್ಧೆಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡುವ ಕೆಲಸ ಶಿಕ್ಷಕರಿಂದ ಆಗಬೇಕುರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಮ್ಮ ಜಿಲ್ಲೆಯ ಮಕ್ಕಳು ಭಾಗವಹಿಸಿ ಬಹುಮಾನ ಪಡೆದು ನಮ್ಮ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.

Related News

home
ದಾವಣಗೆರೆ: ವಸತಿ ರಹಿತರಿಗೆ ಆಶ್ರಯ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
June 8, 2026
guest teacher job
ದಾವಣಗೆರೆ: ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
June 8, 2026
Morarji Desai school 1
ದಾವಣಗೆರೆ: ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
June 8, 2026

prathibah karanji 3

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ ಮಾತನಾಡಿ, ಪ್ರತಿಯೊಂದು ಮಗುವು ತನ್ನದೇ ಆದ ಪ್ರತಿಭೆಯನ್ನು ಹೊಂದಿರುತ್ತದೆ. ಇದನ್ನು ಗುರುತಿಸುವ ಕೆಲಸವನ್ನು ಪೋಷಕರು ಮತ್ತು ಶಿಕ್ಷಕರು ಮಾಡಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ತೊಡಗಬೇಕು. ಹುಟ್ಟಿದ ಎಲ್ಲಾ ಮಕ್ಕಳು ಡಾಕ್ಟರ್ ಮತ್ತು ಎಂಜಿನಿಯರ್‍ಗಳಾಗಲು ಸಾಧ್ಯವಿಲ್ಲ. ಪ್ರತಿಯೊಂದು ಮಗುವು ಕಲೆ. ಸಂಗೀತ ಮತ್ತು ಚಿತ್ರಕಲೆ ಇಂತಹ ವಿಭಿನ್ನ ಕಲೆಗಳನ್ನು ಹೊಂದಿರುತ್ತದೆ ಇದನ್ನು ನಾವು ಪ್ರೋತ್ಸಾಹಿಸಿದಾಗ ಮಕ್ಕಳಲ್ಲಿನ  ಪ್ರತಿಭೆ ಹೊರಹೊಮ್ಮಲಿದೆ ಎಂದು ತಿಳಿಸಿದರು.

Related News

rain22
ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ; ಕೆಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
June 7, 2026
rain news 1
ಕರಾವಳಿಗೆ ಎಂಟ್ರಿ ಕೊಟ್ಟ ಮುಂಗಾರು ಮಳೆ; 48 ಗಂಟೆಯಲ್ಲಿ ರಾಜ್ಯ ವ್ಯಾಪಿ ವಿಸ್ತರಣೆ; ಒಂದು ವಾರ ಭಾರೀ ಮಳೆ ಮುನ್ಸೂಚನೆ
June 6, 2026
davangere drugs news 1
ದಾವಣಗೆರೆ: ಜಿಲ್ಲಾ ಪೊಲೀಸ್ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮ ಜಾಗೃತಿ
June 6, 2026

prathiba karanji 5

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಪಠ್ಯದ ಜೊತೆಗೆ ಮಕ್ಕಳು ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಬೇಕು. ಅದೃಷ್ಟ ಮತ್ತು ಸಾಧನೆ ನಮ್ಮನ್ನು ಉತ್ತುಂಗ ಸ್ಥಾನಕ್ಕೆ ಏರಿಸುತ್ತದೆ. ಮಕ್ಕಳು ಪರಿಶ್ರಮ ವಹಿಸಿದರೆ ಆ ಸ್ಥಾನ ಮುಂದುವರಿಯುತ್ತದೆ. ಆದ್ದರಿಂದ ಮಕ್ಕಳು ಹೆಚ್ಚಿನ ಪರಿಶ್ರಮ ವಹಿಸಬೇಕು ಎಂದ ಅವರು ಇದೇ ಸಂದರ್ಭದಲ್ಲಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುವ ಎಲ್ಲ ಮಕ್ಕಳಿಗೂ ಮತ್ತು ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿದ ಪೋಷಕರು, ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಶೈಲಜಾ ಬಸವರಾಜ್, ಜಿ.ಪಂ. ಸದಸ್ಯ ಹದಡಿ ನಿಂಗಪ್ಪ, ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷೆ ಮಮತ ಮಲ್ಲೇಶಪ್ಪ, ಸೋಮೇಶ್ವರ ವಿದ್ಯಾಲಯ ಕಾರ್ಯದರ್ಶಿ ಸುರೇಶ್, ಪಾಲಿಕೆ ಸದಸ್ಯರಾದ ಕೆ.ಎಂ ವೀರೇಶ್, ಎಸ್.ಮಂಜುನಾಥ್, ಉಮಾ ಪ್ರಕಾಶ್, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಮರುಳಪ್ಪ, ಸಂಘದ ಕಾರ್ಯದರ್ಶಿ ಬಿ.ಎಂ. ಚೌಡಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಲಿಂಗಪ್ಪ, ಉಪಾಧ್ಯಕ್ಷ ಆರ್.ಜಿ. ಅಜ್ಜಯ್ಯ, ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಈಶಾನಾಯ್ಕ, ಕಾರ್ಯದರ್ಶಿ ಶ್ರೀನಿವಾಸ್, ಪರಿಶಿಷ್ಟ ಜಾತಿ ಮತ್ತು ಪಂಗಡದ ಜಿಲ್ಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಗದಿಗೆಪ್ಪ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಗಂಗಾಧರಪ್ಪ, ಕಾರ್ಯದರ್ಶಿ ಪಂಚಾಕ್ಷರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜ್ಜಯ್ಯ, ಕ್ಷೇತ್ರ ಸಮನ್ವಯಾಧಿಕಾರಿ ಉಮಾದೇವಿ ಉಪಸ್ಥಿತರಿದ್ದರು.

 

Related News

crime news
ದಾವಣಗೆರೆ: ಮನೆ ಕಳ್ಳತನ ಆರೋಪಿ ಬಂಧನ; 5.31 ಲಕ್ಷ ಮೌಲ್ಯದ ಸ್ವತ್ತು ವಶ
June 6, 2026
davangere crime news 6
ದಾವಣಗೆರೆ: ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ; ರಸ್ತೆ ಅಡ್ಡಗಟ್ಟಿ 38 ಲಕ್ಷ ದೋಚಿದ್ದ ಗ್ಯಾಂಗ್ ನ ನಾಲ್ವರು ಆರೋಪಿಗಳ ಬಂಧನ
June 5, 2026
davangere envernament
ಯುವ ಪೀಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿವಹಿಸಿ: ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ
June 5, 2026

 

 

 

TAGGED:# Davangere#newsfeaturedprathiba karanjiravindranathಪ್ರತಿಭಾ ಕಾರಂಜಿಶಾಸಕ ಎಸ್.ಎ. ರವೀಂದ್ರನಾಥ
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಆನಂದ್ ಸಿಂಗ್ 8 ಗ್ರಾಂ ಚಿನ್ನದ ನಾಣ್ಯ ಉಡುಗೊರೆ :  ಕಾಂಗ್ರೆಸ್ ಆರೋಪ
Next Article  ಕ್ಷಯರೋಗ ಪತ್ತೆ ಆಂದೋಲನಕ್ಕೆ ಚಾಲನೆ
Leave a Comment

Leave a Reply Cancel reply

Your email address will not be published. Required fields are marked *

Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!