ನಕಲಿ ಜಾತಿ ಪ್ರಮಾಣ ಪತ್ರ; 13 ದಲಿತ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಿಸಿದ ರೇಣುಕಾಚಾರ್ಯ ಸಹೋದರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಬೇಡ ಜಂಗಮ ಎಂದು ನಕಲಿ ಎಸ್ಸಿ ಜಾತಿ ಪ್ರಮಾಣ ಪತ್ರ ಪ್ರಕರಣಕ್ಕೆ ಸಬಂಧಿಸಿದಂತೆ ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ ಸಹೋದರ ದಾರಕೇಶ್ವರಯ್ಯ ಅವರನ್ನು ದಲಿತ ಮುಖಂಡರು ಮುತ್ತಿಗೆ ಹಾಕಿದ್ದರು. ಈ ವೇಳೆ ನಡೆದ ಗಲಾಟೆಗೆ ಸಬಂಧಿಸಿದಂತೆ ದಾರಕೇಶ್ವರಯ್ಯ 13 ಜನ ದಲಿತ ಮುಖಂಡ ವಿರುದ್ಧ ಎಫ್ ಐ ಅರ್ ದಾಖಲಿಸಿದ್ದಾರೆ.

ಈ ಮೂಲಕ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ. ದ್ವಾರಕೇಶ್ವರಯ್ಯ ಹೋರಾಟಕ್ಕೆ ಮುಂದಾಗಿದ್ದಾರೆ. ದಾವಣಗೆರೆಯ ಹೂವಿನಮಡು ಅಂಜನಪ್ಪ, ಹೆಗ್ಗೆರೆ ರಂಗಪ್ಪ, ಸೇರಿ 13 ಜನ ದಲಿತ ಮುಖಂಡರ ವಿರುದ್ಧ ಎಫ್.ಐ.ಆರ್ ದಾಖಲಿಸಿದ್ದಾರೆ. ಮಾರ್ಚ್ 28 ರಂದು ದಾವಣಗೆರೆ ಪ್ರೆಸ್ ಕ್ಲಬ್ ಎದುರು ನಡೆದ ಘಟನೆ ಹಿನ್ನೆಲೆ ಎಫ್ ಐ ಆರ್ ದಾಖಲು ಮಾಡಲಾಗಿದೆ. ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದಾರಕೇಶ್ವರಯ್ಯ ದೂರು ದಾಖಲಿಸಿದ್ದಾರೆ.

ರೇಣುಕಾಚಾರ್ಯ ವಿರುದ್ಧ ಹೋರಾಟಕ್ಕೆ ಸಜ್ಜಾದ ದಲಿತ ಸಂಘಟನೆಗಳು ರೇಣುಕಾಚಾರ್ಯ ಕುಟುಂಬ ಈಗಾಗಲೇ ಹಿಂದು ಲಿಂಗಾಯತ ಇದ್ದವರು ಬೇಡಜಂಗಮ ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಈ ವಿಚಾರ ಪ್ರಶ್ನೆ ಮಾಡಿದಕ್ಕೆ ರೇಣುಕಾಚಾರ್ಯ ಸಹೋದರ ನಮ್ಮ ಮೇಲೆ ದೂರು ದಾಖಲಿಸಿದ್ದಾರೆ. ರೇಣುಕಾಚಾರ್ಯ ಅವರನ್ನ ತಕ್ಷಣ ಗಡಿಪಾರು ಮಾಡಬೇಕು ಎಂದು ದಲಿತ ಸಂಘಟನೆಗಳು ಎಚ್ಚರಿಕೆ ನೀಡಿವೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *