ದಾವಣಗೆರೆ: ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕಾರಿಗಳು ಏ. 07 ರಂದು ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ನಗರದ ಹಳೇ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ ರವರು ಏ. 07 ರ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 01.30 ರವರೆಗೆ ಸಾರ್ವಜನಿಕರಿಂದ ಅಹವಾಲು ಹಾಗೂ ದೂರುಗಳನ್ನು ಸ್ವೀಕರಿಸುವರು. ದೂರುದಾರರು ಪ್ರಪತ್ರ-1 ಮತ್ತು 2 ರಲ್ಲಿ ಅಫಿಡವಿಟ್ನೊಂದಿಗೆ ಸಲ್ಲಿಸಬಹುದು.
ದೂರುಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



