ದಾವಣಗೆರೆ: ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಯುವಕರ ಸಂಘದಿಂದ ಇಂದು ಕೊಂಡಜ್ಜಿ ರಸ್ತೆಯ ಆರ್.ಟಿ.ಓ. ಕಚೇರಿ ಹತ್ತಿರ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರಿನಲ್ಲಿನಿರ್ಮಾಣಕ್ಕೆ ಗುದ್ದಲಿ ಪೂಜೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮೇಯರ್ ಜಯಮ್ಮ ಗೋಪಿ ನಾಯ್ಕ, ಉಪ ಮೇಯರ್ ಗಾಯತ್ರಿ ಖಂಡೋಜಿ ರಾವ್, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ನಿಕಟಪೂರ್ವ ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶಾಂತಕುಮಾರ್ ಸೋಗಿ, ಸಿದ್ಧಗಂಗಾ ಶ್ರೀ ಯುವಕರ ಸಂಘದ ಅಧ್ಯಕ್ಷ ಶಂಕರ್, ವೀರೇಶ್, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿರ್ದೇಶಕ ಗೌತಮ್ ಜೈನ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.



