ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣದಲ್ಲಿ ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್ನಲ್ಲಿ ನವಜಾತ ಶಿಶು ಸಾವನ್ನಪ್ಪಿದ ಘಟನೆ ನಡೆದಿದೆ.
ಶೃಂಗಾರಬಾಬು ತಾಂಡಾದ ಹಾಲೇಶ್ ಪತ್ನಿ ಸ್ವಾತಿಗೆ ಹರಿಗೆ ನೋವು ಆಂಬುಲೆನ್ಸ್ನಲ್ಲೇ ಕರೆದುಕೊಂಡು ಹೋಗುವಾಗ ಆಕ್ಸಿಜನ್ ಕೊರತೆಯಿಂದ ಮಗು ಮೃತಪಟ್ಟಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬಂಧಿಕರು ದಾಖಲಿಸಿದ್ದರು. ಆದರೆ, ಬಳಿಕ ಅವಘಡ ಸಂಭವಿಸಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.



