ದಾವಣಗೆರೆ: ಸಂಸದರು ಕಾಮಗಾರಿಗಳ ಅಂದಾಜು ಹೇಳಿಕೆ ಕೊಡುವುದನ್ನು ನಿಲ್ಲಿಸಲಿ – ಕೆ.ಎಲ್.ಹರೀಶ್ ಬಸಾಪುರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನೂತನವಾಗಿ ದಾವಣಗೆರೆ ಹರಿಹರ ನಗರಭಿವೃದ್ದಿ ಅಧಿಕಾರದ ಅಧ್ಯಕ್ಷರ ಅಧಿಕಾರ ಸ್ವೀಕರ ಸಮಾರಂಭದಲ್ಲಿ ಮಾತನಾಡಿರುವ ಸಂಸದರಾದ ಶ್ರೀ ಜಿ.ಎಂ. ಸಿದ್ದೇಶ್ವರ ರವರು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ 30 ರಿಂದ 40 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ಹೇಳಿಕೆ ನೀಡಿದ್ದು, ಮಾನ್ಯ ಸಂಸದರು 30 ಕೋಟಿ ಅಥವಾ 40 ಕೋಟಿ ಅನ್ನುವುದನ್ನು ಸಾರ್ವಜನಿಕರಿಗೆ ಸರಿಯಾಗಿ ತಿಳಿಸಬೇಕು ಅಂದಾಜು ಹೇಳಿಕೆ ಕೊಡುವುದನ್ನು ಬಿಡಬೇಕು ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಕೆ.ಎಲ್.ಹರೀಶ್ ಬಸಾಪುರ ಆಗ್ರಹಿಸಿದ್ದಾರೆ.

ಇನ್ನು ಬಾತಿ ಕೆರೆ ಅಭಿವೃದ್ಧಿಗೆ 12 ಕೋಟಿ ರೂಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಂಸದರು ತಿಳಿಸಿದ್ದು, ಬಾತಿ ಕೆರೆ ಅಭಿವೃದ್ಧಿಗೆ ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ರವರು ಕುಂದವಾಡ ಕೆರೆ ಅಭಿವೃದ್ಧಿ ಮಾದರಿಯಲ್ಲಿ ಯೋಜನೆ ರೂಪಿಸಿದ್ದಾಗ ಸ್ಥಳೀಯ ಕೆಲವರು ಅದಕ್ಕೆ ಅಡ್ಡಿಪಡಿಸಿ ಯೋಜನೆ ಸ್ಥಗಿತಕ್ಕೆ ಕಾರಣೀಭೂತರಾಗಿದ್ದಾರೆ, ಈಗಲಾದರೂ ಬಾತಿ ಕೆರೆಗೆ ಅಭಿವೃದ್ಧಿಯ ಭಾಗ್ಯ ದೊರೆಯಲಿ ಎಂಬುದು ನಮ್ಮ ಬಯಕೆಯಾಗಿದೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *