ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನಲ್ಲೂರಿನಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಬರುತ್ತಿದ್ದ 3 ಲಾರಿ ಮತ್ತು ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಲಿಂಗದಹಳ್ಳಿ ಕಡೆಯಿಂದ ತುಂಬಿಕೊಂಡು ಬರುತ್ತಿದ್ದ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಅಕ್ರಮ ಮರಳು ಸಾಗಾಟ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ 30 ಲಕ್ಷ ಬೆಲೆ ಬಾಳುವ ಮೂರು ಲಾರಿ, 75 ಸಾವಿರ ಬೆಲೆಯ ಮರಳು ಹಾಗೂ ಮೂವರು ಆರೋಪಿಗಳನ್ನು ಚನ್ನಗಿರಿ ಉಪ ವಿಭಾಗದ ಡಿವೈಎಸ್ ಪಿ ಡಾ. ಸಂತೋಷ್ ನೇತೃತ್ವದಲ್ಲಿ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



