ಏ. 23ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆಗೆ ಆಗಮನ; ಬೃಹತ್ ಉದ್ಯೋಗ ಮೇಳ ಉದ್ಘಾಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ.23 ರಂದು ದಾವಣಗೆರೆ ಜಿಲ್ಲೆಯಲ್ಲಿ ತಾತ್ಕಾಲಿಕ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೃಹತ್ ಉದ್ಯೋಗ ಮೇಳ ಉದ್ಘಾಟಿಸಲಿದ್ದಾರೆ.

ಏ.23 ರ ಶನಿವಾರ ಬೆ.10ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ (ಹೆಲಿಕಾಪ್ಟರ್ ಮೂಲಕ) ದಿಂದ ಹೊರಟು 10.45ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್‍ಗೆ ಅಗಮಿಸುವರು. ಬೆ.11.15ಕ್ಕೆ ಜಿಎಂಐಟಿ ಹೆಲಿಪ್ಯಾಡ್‍ನಿಂದ (ರಸ್ತೆಯ ಮೂಲಕ) ಹೊರಟು ಬೆ.11.30ಕ್ಕೆ ಶ್ರೀ ಪಂಚಮಶಾಲಿ ಜಗದ್ಗುರು ಪೀಠ ಹರಕ್ಷೇತ್ರ ಹರಿಹರ ವತಿಯಿಂದ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳ ಮತ್ತು ರಾಷ್ಟ್ರೀಯ ಶಿಕ್ಷಣ – ಕೌಶಲ್ಯ ಮತ್ತು ಕೃಷಿ ಸಮಾವೇಶ ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು. ಮಧ್ಯಾಹ್ನ 01.30ಕ್ಕೆ ಶ್ರೀ ಪಂಚಮಶಾಲಿ ಗುರುಪೀಠದಿಂದ ಹೊರಟು ಜಿಎಂಐಟಿ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *