ದಾವಣಗೆರೆ: ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾದ ಬಣವೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಜಗಳೂರು: ಆಕಸ್ಮಿಕ ಬೆಂಕಿಗೆ 12 ಲೋಡ್ ಮೇವಿನ ಬಣವೆ ಸುಟ್ಟು ಭಸ್ಮವಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹೊರವಲಯದಲ್ಲಿನ‌ ಲಿಂಗಣ್ಣನಹಳ್ಳಿ ರಸ್ತೆ ಸಮೀಪದ ಅಜ್ಜಯ್ಯನ ದೇವಸ್ಥಾನ‌ ಪಕ್ಕದಲ್ಲಿನ ಕಣದಲ್ಲಿಈ ದುರಂತ  ಸಂಭವಿಸಿದೆ.  ಅಗ್ನಿ ದುರಂತಕ್ಕೆ ನಿರ್ದಿಷ್ಠ ಕಾರಣ ತಿಳಿದು ಬಂದಿಲ್ಲ.

ಸುಮಾರು ಒಂದು ಲಕ್ಷ ಮೌಲ್ಯದ ಮೇವಿನ ಬಣವೆ ಸುಟ್ಟು ಹೋಗಿದೆ.  ಪಟ್ಟಣದ ಇಂದಿರಾ ಬಡಾವಣೆ ನಿವಾಸಿ  ಪಾಪಜ್ಜರ ತಿಮ್ಮಣ್ಣ ,ರೇವಣ್ಣ ಸಹೋದರರಿಗೆ ಸೇರಿದ ಬಣವೆಯಾಗಿದೆ. ಬೆಳಗಿನ ಜಾವ ಕಣಕ್ಕೆ ಬಂದಾಗ ಬೆಂಕಿ ಕಂಡಿದೆ.  ಬೆಂಕಿ ನಂದಿಸಲು ಸಾಧ್ಯವಾಗಿಲ್ಲ.  ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ  ನಂದಿಸುವಷ್ಟರಲ್ಲಿ  ಬಣವೆಯೂ ಸಂಪೂರ್ಣ ಸುಟ್ಟು ಹೋಗಿದೆ.ಗುಡುಗು ಸಿಡಿಲು ತಗುಲಿ ಬೆಂಕಿ ಸಂಭವಿಸಿರಬಹುದು. ಇಲ್ಲವೇ ಯಾರೋ ಉದ್ದೇಶ ಪೂರ್ವಕವಾಗಿ ಬೆಂಕಿ ಇಟ್ಟಿದ್ದಾರೋ ಎಂದು ಅನುಮಾನಿಸಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *