ದಾವಣಗೆರೆ ಜಿಲ್ಲಾ ಪೊಲೀಸರ ಎಚ್ಚರಿಕೆ; ತ್ರಿಬಲ್ ರೈಡಿಂಗ್ ದ್ವಿಚಕ್ರ ವಾಹನಗಳ ಮೇಲೆ ವಿಶೇಷ ಕಾರ್ಯಾಚರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ತ್ರಿಬಲ್ ರೈಡಿಂಗ್ ದ್ವಿಚಕ್ರ ಸವಾರಿಗೆ ದಾವಣಗೆರೆ ಜಿಲ್ಲಾ ಪೊಲೀಸ್ ಎಚ್ಚರಿಕೆ‌ ನೀಡಿದ್ದು, ವಿಶೇಷ ಕಾರ್ಯಾಚರಣೆ ನಡೆಸಲಿದೆ. ಡಿವೈಎಸ್ಪಿ ನರಸಿಂಹ ವಿ.ತಾಮ್ರಧ್ವಜ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ನಗರದಲ್ಲಿ ತ್ರಿಬಲ್ ರೈಡಿಂಗ್ ಚಾಲನೆ ಮಾಡುವವರ ಬಗ್ಗೆ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ನಾಗರೀಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಸೂಚನೆ ನೀಡಲಾಗಿದೆ.

ನಗರದ ಪಿಬಿ ರಸ್ತೆಯಲ್ಲಿ ದಿನಾಂಕ 18 /4/ 2022 ರಂದು ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಚಾಲನೆ ಮಾಡುತ್ತಿದ್ದ ಚಾಲಕನನ್ನು ಶ್ರೀ ಅನಿಲ್ ಆರ್.ಪಿ., ಸಂಚಾರಿ ವೃತ್ತ ನಿರೀಕ್ಷಕರು ದಾವಣಗೆರೆ ಇವರು ತಡೆದು ನಿಲ್ಲಿಸಿ ಆರೋಪಿತನ ವಿರುದ್ಧ‌ ನ್ಯಾಯಾಲಯಕ್ಕೆ ತ್ರಿಬಲ್ ರೆಡ್ಡಿಂಗ್ ಮತ್ತು ಅಜಾಗರೂಕತೆಯ ಮತ್ತು ಅತಿವೇಗದ ಚಾಲನೆ ವಿರುದ್ಧ ದೋಷಾರೋಪಣ ಪತ್ರವನ್ನು ದಕ್ಷಿಣ ಸಂಚಾರ ಠಾಣೆಯಿಂದ ದಾಖಲಿಸಿದ್ದು, ಮಾನ್ಯ ಮೂರನೇ ASCJ ಮತ್ತು JMFC ನ್ಯಾಯಾಲಯವು ಆರೋಪಿತನಿಗೆ ಕಲo 128,184,194 ಭಾರತೀಯ ಮೋಟಾರ್ ಕಾಯ್ದೆಯನ್ವಯ 3300/- ದಂಡ ಹಾಗೂ 3 ತಿಂಗಳು ಚಾಲನಾ ಪತ್ರವನ್ನು ಅಸಿಂಧುಗೊಳಿಸಿದೆ. ಈ ಬಗ್ಗೆ ಘನ ನ್ಯಾಯಾಲಯವು ಆರ್.ಟಿ.ಓ ರವರಿಗೂ ಕೂಡ ನಿರ್ದೇಶನ ನೀಡಿರುತ್ತದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *