ದಾವಣಗೆರೆ: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರಿದಿದ್ದು, ಭಾರೀ ಮಳೆಗೆ 22.45 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿಯಲ್ಲಿ 10.8 ಮಿ.ಮೀ, ದಾವಣಗೆರೆ 1.6 ಮಿ.ಮೀ, ಹರಿಹರ 1.0 ಮಿ.ಮೀ, ಹೊನ್ನಾಳಿ 5.3 ಮಿ.ಮೀ, ಜಗಳೂರು 2.3 ಮಿ.ಮೀ ಹಾಗೂ ನ್ಯಾಮತಿಯಲ್ಲಿ 7.5 ಮಿ.ಮೀ ವಾಸ್ತವ ಮಳೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸರಾಸರಿ ವಾಡಿಕೆ 7.00 ಮಿ.ಮೀ ಇದ್ದು ವಾಸ್ತವ ಮಳೆ 5.00 ಮಿ.ಮೀ ಆಗಿದೆ.
ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ 12 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, 14 ಎಕರೆ ಬಾಳೆ ಮತ್ತು 6 ಎಕರೆ ಈರುಳ್ಳಿ ಬೆಳೆ ಹಾನಿಯಾಗಿದ್ದು ಒಟ್ಟು 8.85 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಹರಿಹರ ತಾಲ್ಲೂಕಿನ ವ್ಯಾಪ್ತಿಯಲ್ಲಿ 2 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ಒಟ್ಟು 0.60 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಹೊನ್ನಾಳಿ ತಾಲ್ಲೂಕಿನಲ್ಲಿ 1.25 ಎಕರೆ ಜೋಳ ಮತ್ತು 11.25 ಎಕರೆ ಮೆಕ್ಕೆಜೋಳ ಬೆಳೆಗೆ ಹಾನಿಯಾಗಿ ಒಟ್ಟು 5.20 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.
ನ್ಯಾಮತಿ ತಾಲ್ಲೂಕಿನಲ್ಲಿ 4 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು 7 ಎಕರೆ ಮೆಕ್ಕೆಜೋಳ ಬೆಳೆಗೆ ಹಾನಿಯಾಗಿ ಒಟ್ಟು 4.10 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 5 ಪಕ್ಕಾ ಮತ್ತು 4 ಕಚ್ಚಾ ಮನೆ ಹಾನಿಯಾಗಿದ್ದು, 0.30 ಎಕರೆ ಅಡಿಕೆ ಬೆಳೆಗೆ ಹಾನಿಯಾಗಿ ಒಟ್ಟು 3.70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟು 22.45 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.