ದಾವಣಗೆರೆ: ಜಗಳೂರು ತಾಲ್ಲೂಕಿನ ಬಿಳಚೋಡು ಗ್ರಾಮದ ಕುರುಬರ ಕೇರಿಯಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 20 ಚೀಲಗಳಲ್ಲಿರವ 11 ಕ್ವಿಂ ಅಕ್ಕಿಯನ್ನು ಜಪ್ತಿ ಮಾಡಿಕೊಳ್ಳಲಾಗಿದ್ದು, ಧಾನ್ಯವನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ, ಮೇ.05 ರಂದು ಬೆಳಿಗ್ಗೆ 11 ಗಂಟೆಗೆ ಜಗಳೂರು ಎಪಿಎಂಸಿ ಆವರಣದಲ್ಲಿನ ಕೆಎಸ್ಸಿಎಫ್ಸಿ ಸಗಟು ಮಳಿಗೆಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು, ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಹರಾಜಿನಲ್ಲಿ ಭಾಗವಹಿಸುವ ಬಿಡ್ದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್ನೊಂದಿಗೆ ಹಾಜರಾಗಬೇಕು. ಹರಾಜು ದಿನ ಒಂದು ಗಂಟೆ ಮುಂಚೆ ಬಂದು 2000 ರೂ. ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಎಂದು ಜಗಳೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



