ದಾವಣಗೆರೆ: ನಗರದ ನಿಟುವಳ್ಳಿಯ ಬಾಡಿ ಬಿಲ್ಡರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿ ದುರ್ಗದ ದೇವಸ್ಥಾನದ ಸಮೀಪದ ಹಾಲಮ್ಮನ ತೋಪಿನ ಬಳಿ ನಡೆದಿದೆ.
ನಗರದ ನಿಟುವಳ್ಳಿಯ ನಿವಾಸಿಯಾದ ಧನ್ಯಕುಮಾರ್ (31) ಕೊಲೆಯಾದ ಬಾಡಿ ಬಿಲ್ಡರ್ . ಊಟಕ್ಕೆ ಕರೆದು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ದೇಹದಾರ್ಡ್ಯ ಪಟುವಾಗಿದ್ದ ಧನ್ಯಕುಮಾರ್, ಹಲವಾರು ದೇಹದಾರ್ಡ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದರು. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತರೇ ಆತನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿರಬಹುದು ಎಂಬ ಶಂಕಿಸಲಾಗಿದೆ.
ಯುವಕನೊಬ್ಬನ ಜತೆ ಬುಧವಾರ ರಾತ್ರಿ ಉಚ್ಚಂಗಿದುರ್ಗಕ್ಕೆ ಹೋಗಿ ಬರುವುದಾಗಿ ಸ್ನೇಹಿತರ ಬಳಿ ಧನ್ಯಕುಮಾರ್ ಹೋಗಿದ್ದನು. ಉಚ್ಚಂಗಿದುರ್ಗದ ಹಾಲಮ್ಮ ತೋಪಿನಲ್ಲಿ ರಕ್ತಸಿಕ್ತವಾಗಿ ಬಿದ್ದಿರುವ ಸ್ಥಿತಿಯಲ್ಲಿ ಧನ್ಯಕುಮಾರ್ ವಶ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



