ದಾವಣಗೆರೆ: ಜಿಲ್ಲೆಯಲ್ಲಿ ಏ.28 ರಂದು 21.62 ಮಿ.ಮೀ. ಸರಾಸರಿ ಮಳೆಯಾಗಿದ್ದು. 18ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿ 48.4 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 1.85, ಹರಿಹರದಲ್ಲಿ 3.60 ಮಿ.ಮೀ, ಹೊನ್ನಾಳಿ 30.2 ಮಿ.ಮೀ ಮಳೆಯಾಗಿದೆ. ಜಗಳೂರು 6.12 ಮಿ.ಮೀ, ನ್ಯಾಮತಿಯಲ್ಲಿ 39.6 ಮಿ.ಮೀ ಮಳೆಯಾಗಿದೆ. ನ್ಯಾಮತಿ ತಾಲ್ಲೂಕಿನ ವ್ಯಾಪ್ತಿಯಲ್ಲಿ 02 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ 0.50 ಲಕ್ಷ ಮತ್ತು 2.10 ಎಕರೆ ಮೆಕ್ಕೆಜೋಳದ ಬೆಳೆ ಹಾನಿಯಾಗಿದ್ದು, ರೂ.0.64 ಲಕ್ಷ ಒಟ್ಟು ರೂ.1.18 ಲಕ್ಷ ನಷ್ಟ ಸಂಭವಿಸಿದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಎಕರೆ ಬಾಳೆ ಬೆಳೆ ಹಾನಿಯಾಗಿದ್ದು ಅಂದಾಜು 0.50 ಲಕ್ಷಮತ್ತು 6 ಕುರಿ, 29 ಮೇಕೆ ಮರಣ ಹೊಂದಿದ್ದು, ರೂ..50 ಲಕ್ಷ ಒಟ್ಟು ರೂ.4 ಲಕ್ಷ ನಷ್ಟ ಸಂಭವಿಸಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.



