ದಾವಣಗೆರೆ: ನಾಳೆ ರೇಬೀಸ್ ಲಸಿಕಾ ಸಪ್ತಾಹ; ಮೇ 06 ರವರೆಗೆ ಶ್ವಾನ, ಬೆಕ್ಕುಗಳಿಗೆ ಉಚಿತ ಲಸಿಕೆ  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ  ಸಂಯುಕ್ತಾಶ್ರಯದಲ್ಲಿ ನಾಳೆ (ಏ.30) ವಿಶ್ವ ಪಶುವೈದ್ಯಕೀಯ ದಿನಾಚರಣೆ ಹಾಗೂ ರಾಷ್ಟ್ರೀಯ ಜಾನುವಾರು ಮಿಶನ್ ಕಾರ್ಯಕ್ರಮದಡಿ ಪಶುವೈದ್ಯರಿಗೆ ತಾಂತ್ರಿಕ ಸಂಕಿರಣ ಹಾಗೂ ರೇಬೀಸ್ ಲಸಿಕಾ ಸಪ್ತಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಬೆಳಿಗ್ಗೆ 10.30ಕ್ಕೆ ಪಶು ಆಸ್ಪತ್ರೆಯ ಆವರಣದ ಉಪ ನಿರ್ದೇಶಕರ ಕಚೇರಿಯ  ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಜಿ.ಪಂ ಉಪಕಾರ್ಯದರ್ಶಿ ಆನಂದ್.ಬಿ ಉದ್ಘಾಟಿಸುವರು. ಪಾಲಿಕೆಯ ಆಯುಕ್ತ  ವಿಶ್ವನಾಥ್ ಮುದ್ದಜ್ಜಿ ರೇಬೀಸ್ ಲಸಿಕಾ ಸಪ್ತಾಹದ ಉದ್ಘಾಟಿಸುವರು.  ಉಪನಿರ್ದೇಶಕ ಡಾ.ಚಂದ್ರಶೇಖರ್ ಎಸ್ ಸುಂಕದ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್ ನಾಗರಾಜ್, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ  ಪಾಲಾಕ್ಷಿ, ಪಾಲಿಕಿನ್ಲಿಕ್‍ನ ಉಪನಿರ್ದೇಶಕ  ಡಾ.ವೀರೇಶ್.ಟಿ.ಆರ್, ಸೂಕ್ಷ್ಮ ಜೀವಿ ವಿಭಾಗದ ಸಹಾಯಕ ಪ್ರಾಧ್ಯಾಪಕ  ಡಾ.ಅರುಣ್, ಪ್ರಾಣಿ ಕಲ್ಯಾಣಿ ಅಧಿಕಾರಿ ಡಾ.ರಾಮಪ್ರಸಾದ್ ಕುಲಕರ್ಣಿ, ಕರ್ನಾಟಕ ಪಶುವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ.ಎಸ್.ಬಿ ರವಿಕುಮಾರ್ ಪಾಲ್ಗೊಳ್ಳುವರು. ಹಾಗೂ ಏ.30 ರಿಂದ ಮೇ.06 ರವರೆಗೆ ಶ್ವಾನ ಹಾಗೂ ಬೆಕ್ಕುಗಳಿಗೆ ಉಚಿತ ರೇಬೀಸ್ ಲಸಿಕಾ ಸಪ್ತಾಹವನ್ನು ಪಾಲಿಕಿನ್ಲಿಕ್ ಆವರಣದಲ್ಲಿ ನಡೆಸಲಾಗುವುದೆಂದು ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆ ತಿಳಿಸಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *