ಡಿವಿಜಿ ಸುದ್ದಿ, ಚಿತ್ರದುರ್ಗ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೋಮವಾರ ಚಿತ್ರದುರ್ಗದ ಮರುಘಾ ಮಠಕ್ಕೆ ಭೇಟಿ ನೀಡಿ ಶೂನ್ಯ ಪೀಠಾಧ್ಯಕ್ಷ ಡಾ. ಶಿವಮೂರ್ತಿ ಮುರುಘಾ ಸ್ವಾಮೀಜಿ ಅವರ ಆರ್ಶಿವಾದ ಪಡೆದರು.

ದರ್ಶನ್ ನಾಯಕ ನಟನಾಗಿ ಅಭಿನಯಿಸಲಿರುವ ಗಂಡುಗಲಿ ಮದಕರಿ ನಾಯಕ ಸಿನಿಮಾ ಚಿತ್ರೀಕರಣ ಶೀಘ್ರದಲ್ಲಿಯೇ ಶುರುವಾಗಲಿದ್ದು,5 ಭಾಷೆಗಳಲ್ಲಿ ಏಕಕಾಲದಲ್ಲಿ ತೆರೆ ಮೇಲೆ ಬರಲಿದೆ.

ಸೋಮವಾರ ಚಿತ್ರೀಕರಣ ಆರಂಭವಕ್ಕೂ ಮುನ್ನ ದರ್ಶನ್ ಮುರುಘಾ ಶ್ರೀಗಳ ಆರ್ಶೀವಾದ ಪಡೆದರು. ಈ ಸಂದರ್ಭದಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ಕಲಾವಿದ ದೊಡ್ಡಣ್ಣ, ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಜೊತೆಗೆ ಇದ್ದರು.



