ದಾವಣಗೆರೆ: ಖತರ್ನಾಕ್ ಕಳ್ಳರ ಕೈಚಳಕ; ಮನೆ ಬೀಗ ಮುರಿದು 3.76 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖತರ್ನಾಕ್ ಕಳ್ಳರು ಕೈಚಳಕ ತೋರಿದ್ದು, ಲೆನಿನ್ ನಗರದ ಮನೆಯೊಂದರ ಬೀಗ ಮುರಿದು 3.76 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ನರದ ಹೊಸ ನಿಟುವಳ್ಳಿಯ ಲೆನಿನ್ ನಗರ ನಿವಾಸಿಯಾದ ರೇಣುಕಮ್ಮ(46) ತಮ್ಮ ಇಬ್ಬರು ಹೆಣ್ಣು ಮಕ್ಕಳ ಜತೆ ವಾಸವಿದ್ದರು. ಅವರು ಶಿವಮೊಗ್ಗದ ಸಾಗರದ ತಮ್ಮ ಸಬಂಧಿ‌ ಮನೆಗೆ ಮಕ್ಕಳ ಜತೆ ಹೋಗಿದ್ದರು. ಸಾಗರದಿಂದ ಮನೆಗೆ ಬಂದು ನೋಡಿದಾಗ ಮನೆಯ ಬಾಲು ಬೀಗ‌ಮುರಿಯಲಾಗಿತ್ತು. ಮನೆ ಒಳಗೆ ಹೋಗಿ ನೋಡಿದ್ದಾಗ ಯಾರೋ ಕಳ್ಳರು ಬೀರುವಿನ ಬೀಗವನ್ನು ಆಯುಧದಿಂದ ಮುರಿದು, ಬೀರಿನಲ್ಲಿದ್ದ 121 ಗ್ರಾಂ ತೂಕದ ಬಂಗಾರ ಹಾಗೂ 440 ಗ್ರಾಂ ತೂಕದ ಬೆಳ್ಳಿ ಆಭರಣ ಸೇರಿ ಒಟ್ಟು 3.76 ಲಕ್ಷ ಮೌಲ್ಯದ ಬೆಳ್ಳಿ, ಬಂಗಾರ ದೋಚಿಕೊಂಡು ಹೋಗಿದ್ದಾರೆ ಎಂದು ರೇಣುಕಮ್ಮ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *