ದಾವಣಗೆರೆ: ಜಿಲ್ಲೆಯಲ್ಲಿ ಅಸಾನಿ ಚಂಡಮಾರುತ ಅಬ್ಬರಿಸುತ್ತಿದ್ದು, ಬೇಸಿಗೆಯಲ್ಲಿಯೂ ಜಿಲ್ಲೆಯಲ್ಲಿ ದಾಖಲೆ ಮಳೆಯಾಗಿದೆ. ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಜಿಲ್ಲೆಯಲ್ಲಿ ಚಳಿಯ ವಾತಾವರಣ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ನಿನ್ನೆ (ಮೇ.11) ಜ 11.0 ಮಿ.ಮೀ. ಸರಾಸರಿ ಮಳೆಯಾಗಿದ್ದು. 34.44 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿ 12.0 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 15.0, ಹರಿಹರದಲ್ಲಿ 14.0 ಮಿ.ಮೀ, ಹೊನ್ನಾಳಿ 15.0 ಮಿ.ಮೀ ಮಳೆಯಾಗಿದೆ. ಜಗಳೂರು 3.0 ಮಿ.ಮೀ, ನ್ಯಾಮತಿಯಲ್ಲಿ 7.0 ಮಿ.ಮೀ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ 01 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ 0.30 ಲಕ್ಷ ಮತ್ತು 25-00 ಎಕರೆ ಬೆಳೆ ಹಾನಿಯಾಗಿದ್ದು, ರೂ.0.75 ಲಕ್ಷ ಒಟ್ಟು ರೂ.1.05 ಲಕ್ಷ ನಷ್ಟ ಸಂಭವಿಸಿದೆ.
ಹರಿಹರ ತಾಲ್ಲೂಕಿನ ವ್ಯಾಪ್ತಿಯಲ್ಲಿ 02 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ 0.60 ಲಕ್ಷ ಮತ್ತು 510-00 ಎಕರೆ ಬೆಳೆ ಹಾನಿಯಾಗಿದ್ದು, ರೂ.32.14 ಲಕ್ಷ ಒಟ್ಟು ರೂ.32.74 ಲಕ್ಷ ನಷ್ಟ ಸಂಭವಿಸಿದೆ. ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಎಕರೆ ಅಡಿಕೆ ಬೆಳೆ ಹಾನಿಯಾಗಿದ್ದು, ರೂ.0.25 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.40 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಿಲ್ಲೆಯಲ್ಲಿ ಒಟ್ಟಾರೆ ರೂ34.44 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.