ದಾವಣಗೆರೆ: ಸಿರಿಗೆರೆ ತರಳಬಾಳು ಬೃಹ್ಮಠದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತರಳಬಾಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಮೇ 26 ರಂದು ಪರೀಕ್ಷೆ ನಡೆಯಲಿದೆ.
ವಿಜ್ಞಾನ ವಿಭಾಗದಲ್ಲಿ ಪಿಯುಸಿ ಪ್ರವೇಶ ಪಡೆಯಲು ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಈ ಪರೀಕ್ಷೆ ನಡೆಯಲಿದೆ ಎಂದು ಎಂ. ಬಸಯ್ಯ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯವ ಡಿ.ಎಂ ನಾಗರಾಜ್ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದ್ದು, ಮೇ.26 ರಂದು ಸಿರಿಗೆರೆಯ ಎಂ. ಬಸಯ್ಯ ವಸತಿ ಶಾಲೆಯಲ್ಲಿ ಬೆಳಗ್ಗೆ 11 ಗಂಟೆಗೆ ಪರೀಕ್ಷೆ ನಡೆಯಲಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಕಾಲೇಜು ಶುಲ್ಕ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 7892893772, 9663956275, 944981283 ಸಂಪರ್ಕಿಸಿ.



