ವಿಜಯನಗರ: ಜಿಲ್ಲೆಯ ಪ್ರಸಿದ್ಧ ದೇವಸ್ಥಾನ ಉಚ್ಚoಗಿದುರ್ಗದ ಹಾಲಮ್ಮ ದೇವಸ್ಥಾನದ ಮಹಾದ್ವಾರ ಕಳಸರೋಹಣ. ಉದ್ಘಾಟನೆ ಹಾಗೂ ಭಕ್ತರ ದೇಣಿಗೆ ಯಿಂದ ಸಂಗ್ರಹವಾದ ಆಭರಣಗಳ ಅರ್ಪಣೆ ಕಾರ್ಯಕ್ರಮ ನಡೆಯಿತು.
ಈ ಹಾಲಮ್ಮ ದೇವಸ್ಥಾನದ ಮಹಾದ್ವಾರವನ್ನು ಜಗಳೂರು ಶಾಸಕ ಎಸ್ ವಿ ರಾಮಚಂದ್ರಪ್ಪ ಟೇಪ್ ಕಟ್ ಮಾಡುವ ಮೂಲಕ ಉದ್ಘಾಟನೆ ಮಾಡಿದರೆ ಕಳಸರೋಹಣ ಕಾರ್ಯಕ್ರಮವನ್ನು ಶ್ರೀ ರೇವಣಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ದೀಪಾ ಹಚ್ಚುವ ಮೂಲಕ ಉದ್ಘಾಟನೆ ಮಾಡಿದರು.
ಉಚ್ಚoಗಿದುರ್ಗ ಪುರವರ್ಗ ಮಠದ ಶ್ರೀ ರೇವಣಸಿದ್ದಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯದಲ್ಲಿ ಉಚ್ಚoಗಿದುರ್ಗ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು, ಹಾಲಮ್ಮ ದೇವಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು,ಸದಸ್ಯರು, ಗ್ರಾಮಸ್ಥರು, ಭಕ್ತರು ಉಪಸ್ಥಿತರಿದ್ದರು.



