ದಾವಣಗೆರೆ: ಮೀನು ಕೃಷಿ ಕೈಗೊಳ್ಳಲು ಸಹಾಯಧನಕ್ಕೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಯೋಜನೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಜಮೀನಿನಲ್ಲಿ ಕನಿಷ್ಟ 2000 ಚ.ಮೀ ಮೀನು ಕೃಷಿ ಕೈಗೊಳ್ಳಲು ಕೊಳ ನಿರ್ಮಾಣಕ್ಕೆ ಸಹಾಯ/ಸಲಕರಣೆ ಕಿಟ್ಟು ಹರಿಗೋಲು ವಿತರಣೆ, ಮೀನು ಮಾರಾಟ ಮತ್ತು ಮತ್ಸ್ಯವಾಹಿನಿಗೆ ಸಹಾಯ ಹಾಗೂ ರಾಜ್ಯವಲಯ ಯೋಜನೆಗಳಾದ ಮೀನುಗಾರಿಕೆ ಸಲಕರಣೆ ಕಿಟ್‍ಗೆ ಸಹಾಯ, ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಗಾರರ ಸಹಕಾರ ಸಂಘಗಳಿಗೆ ಹಾಗೂ ವೈಯಕ್ತಿಕ ಮೀನು ಕೃಷಿಕರಿಗೆ ಮೀನುಮರಿ ಖರೀದಿಗೆ ಸಹಾಯ ಯೋಜನೆಯಡಿ ಸಹಾಯ ಒದಗಿಸಲು ಸೇವಾ ಸಿಂಧು ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಹೊಸದಾಗಿ ಮೀನುಕೃಷಿ ಕೊಳ ನಿರ್ಮಾಣ ಮಾಡಲು ಇಚ್ಛಿಸುವವರು ಹಾಗೂ ಮಿನುಗಾರಿಕೆ ಸಂಬಂಧಿಸಿದ ಇತರೆ ಚಟುವಟಿಕೆಗಳಾದ ಆರ್.ಎ.ಎಸ್ ಘಟಕಗಳ ನಿರ್ಮಾಣ ತಾಜಾ ಮೀನು ಮಾರಾಟ ಕೇಂದ್ರಗಳ ಸ್ಥಾಪನೆ ಮೀನು ಸಾಗಣೆ ಮತ್ತು ಮಾರಾಟ ವಾಹನಗಳ ಖರೀದಿಗೆ ಸಹಾಯಧನ ಮತ್ತಿತರ ಚಟುವಟಿಕೆಗಳ ಸದುಪಯೋಗವನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಮೇ.30 ರಂದು ಕೊನೆಯ ದಿನವಾಗಿದ್ದು, ಯೋಜನೆಗಳ ಸಹಾಯಧನ ಪಡೆಯಲು ಆಸಕ್ತ ಒಳನಾಡು ಮೀನುಗಾರರು ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಿ ಅರ್ಜಿಗಳನ್ನು ಸಲ್ಲಿಸಬಹುದೆಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *