ದಾವಣಗೆರೆ: ಭತ್ತ ಕಟಾವು ಮಾಡುವಾಗ ವಿದ್ಯುತ್ ತಂತಿ ತುಳಿದು ಯುವಕ ಮೃತಪಟ್ಟಿರುವ ದುರ್ಘಟನೆ ದಾವಣಗೆರೆ ತಾಲೂಕಿನ ಮಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಗಣೇಶ್(22) ಸಾವನ್ನಪ್ಪಿದ್ದರೆ. ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಬಳಿಕ, ಬೆಸ್ಕಾಂ ಸಿಬ್ಬಂದಿ ವಿರುದ್ಧ ಮಾಗನಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಸ್ಕಾಂ ಸಿಬ್ಬಂದಿ ಸರಿಯಾಗಿ ಕಂಬಗಳನ್ನು ಹಾಗೂ ವಿದ್ಯುತ್ ತಂತಿ ನಿರ್ವಹಣೆ ಮಾಡುತ್ತಿಲ್ಲ. ಸಾಕಷ್ಟು ಬಾರಿ ಗ್ರಾಮಸ್ಥರು ದೂರು ನೀಡಿದರೂ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



