7.50 ಲಕ್ಷ ಬಿಲ್ ಮಂಜೂರಾತಿಗೆ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಕಲಬುರಗಿ ಮಹಾನಗರ ಪಾಲಿಕೆ‌ ಆಯುಕ್ತ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಕಲಬುರಗಿ: 7.50 ಲಕ್ಷ ಬಿಲ್ ಮಂಜೂರಾತಿಗೆ ಲಂಚ ಸ್ವೀಕರಿಸುವಾಗ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶಂಕರಣ್ಣ ವನಿಕ್ಯಾಳ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕೆಎಸ್‌ಎಸ್ ಅಧಿಕಾರಿ ಶಂಕರಣ್ಣ 7.50 ಲಕ್ಷ ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೋವಿಡ್ ಸುರಕ್ಷಾ ಚಕ್ರ ಹೆಲ್ಪ್ ಲೈನ್ ಮಾಲೀಕ ಶರಣು ಎಂಬುವರ ಬಳಿ ಶೇಕಡಾ 2ರಷ್ಟು ಕಮಿಷನ್ ಗೆ ಬೇಡಿಕೆ ಇಟ್ಟಿದ್ದರು. ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ಹೆಲ್ಪ್ ಲೈನ್ ಪ್ರಾರಂಭಿಸಲಾಗಿತ್ತು. 50 ಲಕ್ಷಕ್ಕೂ ಹೆಚ್ಚಿನ ಬಿಲ್ ಪಾವತಿ ಬಾಕಿ ಉಳಿದಿತ್ತು. ಈ ಪೈಕಿ 2ನೇ ಕಂತಿನ ಹಣ ಬಿಡುಗಡೆಗೆ ಪಾಲಿಕೆ ಆಯುಕ್ತ, ಅಕೌಂಟೆಂಟ್ ಚನ್ನಪ್ಪ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಎಸಿಬಿ ಅಧಿಕಾರಿಗಳಿಗೆ ಶರಣು ದೂರು ನೀಡಿದ್ದರು.

ನಿನ್ನೆ(ಜೂ.1) ಸಂಜೆ ಹಣ ಪಡೆಯುವಾಗ ಎಸಿಬಿ ತಂಡ ದಾಳಿ ನಡೆಸಿ ಆಯುಕ್ತ ಶಂಕರಣ್ಣ, ಅಕೌಂಟೆಂಟ್ ಚನ್ನಪ್ಪನನ್ನು ಬಂಧಿಸಿದ್ದಾರೆ. 14,500 ರೂಪಾಯಿ ಲಂಚ ಪಡೆದಿದ್ದಾಗ ದಾಳಿ ನಡೆದಿದೆ.ಚನ್ನಪ್ಪ, ಶರಣು ಎಂಬುವರಿಂದ ಹಣ ಪಡೆದ ಬಗ್ಗೆ ಪಾಲಿಕೆ ಆಯುಕ್ತ ಶಂಕರಣ್ಣ ವನಿಕ್ಯಾಳ್ ಗೆ ಮಾಹಿತಿ ನೀಡಿದ್ದ. ಆಗ ಮನೆಗೆ ಹಣ ತಗೆದುಕೊಂಡು ಬಂದು ಕೊಡುವಂತೆ ಶಂಕರಣ್ಣ ವನಿಕ್ಯಾಳ್ ಹೇಳಿದ್ದರು. ಈ ವೇಳೆ ಎಸಿಬಿ ಪೊಲೀಸರು ಶಂಕರಣ್ಣ ವನಿಕ್ಯಾಳ್ ಮತ್ತು ಚೆನ್ನಪ್ಪನನ್ನು ಟ್ರ್ಯಾಪ್ ಮಾಡಿದಾಗ ಒಂದು ಲಕ್ಷ ನಲವತ್ತೆರಡು ಸಾವಿರ ರೂಪಾಯಿ ವಶಪಡಿಸಿಕೊಂಡಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *