ಎರಡು ದಿನದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕು; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ: ಮುಂಗಾರು ಮಳೆ ಈಗಾಗಲೇ ದಕ್ಷಿಣ ರಾಜ್ಯಗಳಲ್ಲಿ ಪ್ರವೇಶ ಪಡೆದಿದೆ. ಇನ್ನೆರಡು ದಿನಗಳಲ್ಲಿ ಕರ್ನಾಟಕ, ತಮಿಳುನಾಡು, ಗೋವಾ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ಭಾಗಗಳಲ್ಲಿ ಮತ್ತಷ್ಟು ಚುರುಕಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾತಾವರಣದಲ್ಲಿ ಬಲವಾದ ಗಾಳಿ ಮತ್ತು ಮೋಡಗಳ ರಚನೆ ದಟ್ಟವಾಗುತ್ತಿದೆ. ಇದು ಮುಂಗಾರು ಮಳೆ ಪ್ರಬಲವಾಗುವ ಲಕ್ಷಣಗಳಿವೆ ಎಂದು ತಿಳಿಸಿದೆ. ಮೇ 31ರಂದು ಆರಂಭವಾದ ಮುಂಗಾರು ಜೂನ್ 7ರ ನಡುವೆ ದಕ್ಷಿಣ ಮತ್ತು ಮಧ್ಯ ಅರಬ್ಬಿ ಸಮುದ್ರ, ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನ ಕೆಲ ಭಾಗದಲ್ಲಿ ಮಳೆಯಾಗಿದೆ. ಇದೀಗ ಈಶಾನ್ಯ ಭಾರತ ಆವರಿಸಿ, ಉತ್ತಮ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಮಳೆಯಲ್ಲಿ ಯಾವುದೇ ವಿಳಂಬವಾಗಿಲ್ಲ. ಮುಂದಿನ ಎರಡು ದಿನಗಳಲ್ಲಿ ಮಹಾರಾಷ್ಟ್ರ ತಲುಪುವ ಸಾಧ್ಯತೆಯಿದ್ದು, ನಂತರದ ಎರಡು ದಿನಗಳಲ್ಲಿ ಮುಂಬೈ ಮಹಾನಗರವನ್ನೂ ಆವರಿಸುವ ಸಾಧ್ಯತೆ ಇದೆ ಎಂದು ಐಎಂಡಿ‌ ಮಾಹಿತಿ ನೀಡಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *