Connect with us

Dvgsuddi Kannada | online news portal | Kannada news online

ಮುಂಗಾರು ಮಳೆ ಪ್ರವೇಶ ಪಡೆದು ಎರಡು ವಾರ ಕಳೆದರೂ ವ್ಯಾಪಕ ಮಳೆಯಾಗುತ್ತಿಲ್ಲ; ಆತಂಕದಲ್ಲಿ ರೈತ ಸಮುದಾಯ..!

ಪ್ರಮುಖ ಸುದ್ದಿ

ಮುಂಗಾರು ಮಳೆ ಪ್ರವೇಶ ಪಡೆದು ಎರಡು ವಾರ ಕಳೆದರೂ ವ್ಯಾಪಕ ಮಳೆಯಾಗುತ್ತಿಲ್ಲ; ಆತಂಕದಲ್ಲಿ ರೈತ ಸಮುದಾಯ..!

ಬೆಂಗಳೂರು: ನೈರುತ್ಯ ಮುಂಗಾರು ಮಳೆ ರಾಜ್ಯದಲ್ಲಿ ಪ್ರವೇಶ ಪಡೆದು ಎರಡು ವಾರ ಕಳೆದರೂ ಚೇತರಿಕೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಅಲ್ಲಲ್ಲಿ ಮಳೆಯಾದರೂ ವ್ಯಾಪಕ ಮಳೆಯಾಗುತ್ತಿಲ್ಲ. ಇದರಿಂದ ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದ ರೈತ ಸಮುದಾಯ ಆತಂಕಕ್ಕೆ ಉಂಟಾಗಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಪ್ರಮಾಣದ ಮಳೆಯಾಗುತ್ತಿದ್ದರೂ ಇಡೀ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದ ಮಳೆಯಾಗುತ್ತಿಲ್ಲ. ಬಲವಾದ ಮೇಲ್ಮೈ ಗಾಳಿ ಬೀಸುತ್ತಿದೆ. ಆಗಸದಲ್ಲಿ ಮೋಡ ಸಾಗುತ್ತಿರುವ ದೃಶ್ಯ ಸಾಮಾನ್ಯವಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿರುವ ರೈತರು ಮಳೆಗಾಗಿ ಆಕಾಶದತ್ತ ಮುಖ ಮಾಡಿ ನೋಡುತ್ತಿದ್ದಾರೆ.

ಮೇನಲ್ಲಿ ಬಿದ್ದ ಮುಂಗಾರು ಪೂರ್ವ ಮಳೆ ರೈತರು ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಕೆಲವೆಡೆ ಬಿತ್ತನೆಯನ್ನು ಮಾಡಿದ್ದರು. ಪ್ರಾರಂಭವಾಗಿ ಎರಡು ವಾರ ಕಳೆದರೂ ಮುಂಗಾರು ಮಳೆ ಅಬ್ಬರಿಸುತ್ತಿಲ್ಲ. ಇದು ರೈತರನ್ನು ಚಿಂತೆಗೀಡು ಮಾಡಿದೆ.
ಅತಿಹೆಚ್ಚು ಮಳೆಯಾಗುತ್ತಿದ್ದ ಕರಾವಳಿ ಹಾಗೂ ಮಳೆನಾಡು ಭಾಗದಲ್ಲೇ ಮಳೆ ಕೊರತೆ ಎದುರಿಸುವಂತಾಗಿದೆ. ಆರಂಭದಿಂದಲೂ ಮುಂಗಾರು ದುರ್ಬಲವಾಗಿದ್ದು, ಆರ್ಭಟಿಸುವ ಲಕ್ಷಣಗಳು ಗೋಚರಿಸುತ್ತಿಲ್ಲ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top