ದಾವಣಗೆರೆ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರದಲ್ಲಿ 2022-23ನೇ ಸಾಲಿನ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಮೂಲಕ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಮೆಕಾನಿಕಲ್, ಬಿ.ಇ ಮೆಕಾನಿಕಲ್ ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಆಟೋಮೇಷನ್ ಅಂಡ್ ಕಂಟ್ರೋಲ್, ಇಂಟರ್ನೆಟ್ ಆಪ್ ಥಿಂಗ್, ರಿವರ್ಸ್ ಇಂಜಿನಿಯರಿಂಗ್, 3ಡಿ ಪ್ರಿಂಟಿಂಗ್, ವ್ಯಾಲಿಡೇಷನ್ ಲ್ಯಾಬ್, ಸಿ.ಎನ್.ಸಿ ಮ್ಯಾನುಫ್ಯಾಕ್ಚರಿಂಗ್ ಅಂಡ್ ಮಷಿನಿಂಗ್, ರಿಯಾಲಿಟಿ ಲ್ಯಾಬ್, ಪ್ರೊಟಕ್ಟ್ ಡಿಸೈನ್ ಅಂಡ್ ಡೆವೆಲಪ್ಮೆಂಟ್, ಸಿ.ಎನ್.ಸಿ ಆಪರೇಟರ್ ಟರ್ನಿಂಗ್, ಸಿ.ಎನ್.ಸಿ ಪ್ರೋಗ್ರಾಮರ್, ಟರ್ನರ್, ಮಿಲ್ಲರ್, ಗ್ರೈಂಡರ್, ಡಿಸೈನರ್-ಮೆಕಾನಿಕಲ್, ಪ್ರೊಡಕ್ಷನ್ ಇಂಜಿನಿಯರ್, ಟೂಲ್ ರೂಮ್ ಮಷಿನಿಷ್ಟ್ ಕೋರ್ಸ್ಗಳಲ್ಲಿ ಅಲ್ಪಾವಧಿ ತರಬೇತಿಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು.
ತರಬೇತಿ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, 22 ಸಿ & ಡಿ ಕೆ.ಐ.ಎ.ಡಿ.ಬಿ ಇಂಡಸ್ಟ್ರಿಯಲ್ ಏರಿಯಾ ಹರ್ಲಾಪುರ, ಕೆ.ಎಸ್.ಆರ್.ಟಿ.ಸಿ ಡಿಪೋ ಹತ್ತಿರ ಹರಿಹರ, ಪೋನ್ 08192-243937, 9916018111, 8884488202, 8711913947 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಶುಂಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



