ದಾವಣಗೆರೆ: 2013-14ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ಬಾಕಿ ಇರುವ ಪರಿಶಿಷ್ಟ ಪಂಗಡದ 08 ಅಭ್ಯರ್ಥಿಗಳು ಸೇರಿದಂತೆ ಒಟ್ಟು 15 ಅರ್ಹ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ 2 ಲಕ್ಷಗಳ ಸಹಾಯ ಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಅರ್ಜಿ ಕರೆಯಲಾಗಿತ್ತು.
ಈ ಅರ್ಜಿಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜೂ.18 ರಂದು ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ ಅರ್ಜಿ ಪರಿಶೀಲನಾ ಸಮಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅವರ ಮೂಲ ದಾಖಲಾತಿಗಳನ್ನು ಸಹಾಯಕ ನಿರ್ದೇಶಕರವರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಉಪವಿಭಾಗಾಧಿಕಾರಿ ಕಚೇರಿ ಆವರಣ, ರೈಲ್ವೆ ನಿಲ್ದಾಣದ ಪಕ್ಕ, ಪಿ.ಬಿ.ರಸ್ತೆ ದಾವಣಗೆರೆ ಇಲ್ಲಿ ಪರಿಶೀಲನೆ ನಡೆಯಲಿದೆ.
ಈ ಸಂಬಂಧ ಈಗಾಗಲೇ ಅರ್ಹ ಅಭ್ಯರ್ಥಿಗಳು ಸಲ್ಲಿಸಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಹಾಜರಾಗಲು ಈ ಮೂಲಕ ತಿಳಿಸಲಾಗಿದೆ. ನಿಗಧಿತ ದಾಖಲಾತಿಗಳನ್ನು ಸಲ್ಲಿಸದೇ ಇರುವ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ಸೂಚನಫಲಕದಲ್ಲಿ ಈಗಾಗಲೇ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-230123 ನ್ನು ಸಂಪರ್ಕಿಸಬಹುದೆಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



