Connect with us

Dvgsuddi Kannada | online news portal | Kannada news online

ದಾವಣಗೆರೆ: ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ 1.32 ಕೋಟಿ ಪರಿಹಾರ ನೀಡದ KSRTC ಬಸ್ ಜಪ್ತಿ ಮಾಡಿದ ಕೋರ್ಟ್

law

ದಾವಣಗೆರೆ

ದಾವಣಗೆರೆ: ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ 1.32 ಕೋಟಿ ಪರಿಹಾರ ನೀಡದ KSRTC ಬಸ್ ಜಪ್ತಿ ಮಾಡಿದ ಕೋರ್ಟ್

ದಾವಣಗೆರೆ: ಅಪಘಾತ ಸಂಭವಿಸಿ 5 ವರ್ಷವಾದರೂ ಪರಿಹಾರ ನೀಡದ ಎರಡು ಕೆಎಸ್ ಆರ್ ಟಿಸಿ ಬಸ್ ಗಳನ್ನು ಕೋರ್ಟ್​ ಆದೇಶದ ಮೇರೆಗೆ  ಸಿಬ್ಬಂದಿ ಜಪ್ತಿ ಮಾಡಿದ್ದಾರೆ.

2019ರಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿ, ಕಾರಿಗೆ ಬಸ್​ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ 1.32 ಕೋಟಿ ರೂ. ಪರಿಹಾರ ನೀಡುವಂತೆ ಕೋರ್ಟ್​ ಸೂಚಿಸಿತ್ತು. ಆದರೆ, ಪರಿಹಾರ ಸಿಗದ ಹಿನ್ನೆಲೆಯಲ್ಲಿ ಇದೀಗ ಬಸ್ ಜಪ್ತಿ ಮಾಡಲಾಗಿದೆ.

1.32 ಕೋಟಿ ರೂಪಾಯಿ ಮೃತರ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆ ಕೋರ್ಟ್​ ಆದೇಶ ನೀಡಿತ್ತು. ಪರಿಹಾರಕ್ಕಾಗಿ ಮೃತ ಪ್ರಾಧ್ಯಾಪಕನ ಪತ್ನಿ ಪರದಾಡುತ್ತಿದ್ದಾರೆ. ಐದು ವರ್ಷವಾದರೂ ಸಾರಿಗೆ ಇಲಾಖೆ ಪರಿಹಾರ ನೀಡಲಿಲ್ಲ.

ದಾವಣಗೆರೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಎರಡು ಬಸ್​ಗಳನ್ನು ಕೋರ್ಟ್​ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. 2019ರ ಮೇ 6ರಂದು ಈ ಘಟನೆ ನಡೆದಿತ್ತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿಯ ಕಾರ್ ಗೆ ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದು, ದಾವಣಗೆರೆಯ ಎವಿಕೆ ಕಾಲೇಜ್ ಪ್ರಾಧ್ಯಾಪಕ ನಂಜುಂಡಸ್ವಾಮಿ ಸೇರಿ ಇಬ್ಬರು ಸಾವನ್ನಪ್ಪಿದ್ದರು. ಈ ವೇಳೆ ಓರ್ವನಿಗೆ ಗಂಭೀರ ಗಾಯಗಳಾಗಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top