Connect with us

Dvgsuddi Kannada | online news portal | Kannada news online

ದಾವಣಗೆರೆ: IAS ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅವಿನಾಶ್ ರಾವ್ ಗೆ ಶಿಕ್ಷಣ ಸಚಿವರಿಂದ ಸನ್ಮಾನ

IMG 20220614 WA0026 1

ದಾವಣಗೆರೆ

ದಾವಣಗೆರೆ: IAS ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅವಿನಾಶ್ ರಾವ್ ಗೆ ಶಿಕ್ಷಣ ಸಚಿವರಿಂದ ಸನ್ಮಾನ

ದಾವಣಗೆರೆ: ನಗರದ ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ 2022ನನೇ ಸಾಲಿನ ಐಎಎಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಕ್ಕೆ ಪ್ರಥಮ ಸ್ಥಾನ ಪಡೆದ  ದಾವಣಗೆರೆಯ ಅವಿನಾಶ್ ವಿ ರಾವ್ ಅವರಿಗೆ  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಸನ್ಮಾನಿಸಿದರು.

ಅಭಿನಂದನೆಗೆ ಭಾಜನರಾದ ಅವಿನಾಶ್ ಮಾತನಾಡಿ,  ಸಾಧನೆ ಎಂಬುದು ಸಾಧಕನ ಸ್ವತ್ತೆ ಹೊರತು ಸೋಮಾರಿಯ ಸ್ವತ್ತಲ್ಲ ಎಂಬ ಸ್ವಾಮಿ ವಿವೇಕಾನಂದರ ಅಮೃತವಾಣಿ ಸ್ಮರಿಸಿದರು.  ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಮಾತನಾಡಿ,  ಸಮುದ್ರವನ್ನೇ ದಾಟಿದ ಜಾಂಬವಂತನನ್ನು ನಾವು ನೀವೆಲ್ಲರೂ ನಮ್ಮ ಜೀವನದಲ್ಲಿ ಸ್ಪೂರ್ತಿದಾಯಕವನ್ನಾಗಿ ಇಟ್ಟುಕೊಂಡು ಜೀವನದಲ್ಲಿ ಮುನ್ನಡೆಯಬೇಕೆಂದು.  ಶಿಕ್ಷಣ ಎಂಬುದು ಕೇವಲ ಒಂದು ವೃತ್ತಿಯನ್ನಾಗಿಸಿಲ್ಲ ಇದು ಹಲವು ಕ್ಷೇತ್ರಗಳಲ್ಲಿ ಸೃಷ್ಟಿಸಿರುವ ಒಂದು ಸ್ಪೂರ್ತಿದಾಯಕ ಚಿಲುಮೆ ಎಂದರು.

2021ನೇ ಸಾಲಿನ ಎಸ್.ಎಸ್.ಎಲ್.ಸಿ  ಪರೀಕ್ಷೆಯಲ್ಲಿ ಶಾಲೆಗೆ ಮೊದಲಾಗಿ ಅಂಕಪಡೆದ ವಿದ್ಯಾರ್ಥಿಗಳಿಗೆ ಅಭಿನಂದಸಿದರು. ಕಾರ್ಯಕ್ರಮದಲ್ಲಿ ಮಾಯಕೊಂಡ ಕ್ಷೇತ್ರದ ಶಾಸಕ ಪ್ರೊ.ಲಿಂಗಣ್ಣ, ಮಾಜಿ ವಿಧಾನ ಪರಿಷತ್ ಸಚೇತಕರಾದ ಶಿವಯೋಗಿಸ್ವಾಮಿ, ಸರ್.ಎಂ.ವಿ ಕಾಲೇಜು ಕಾರ್ಯದರ್ಶಿ ಶ್ರೀಧರ್, ಸೋಮೇಶ್ವರ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಹಾಗೂ ಧೂಡ ಅಧ್ಯಕ್ಷ ಕೆ.ಎಂ.ಸುರೇಶ್ ಹಾಗೂ ಪ್ರಾಂಶುಪಾಲರಾದ ಪ್ರಭಾವತಿ, ನಿರ್ದೇಶಕ ಪತ್ರೆಶ್, ಆಡಳಿತಾಧಿಕಾರಿ ಹರೀಶ್ ಬಾಬು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top