ದಾವಣಗೆರೆ: ಅಡಿಕೆಗೆ ಕೀಟ, ರೋಗಬಾಧೆ ಹೆಚ್ಚಳ ಎಚ್ಚರಿಕೆ ನೀಡಿದ ತೋಟಗಾರಿಕೆ ತಜ್ಞ ಬಸವನಗೌಡ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ಹಾಗೂ ಹಿರೇಕೋಗಲೂರು ತರಳಬಾಳು ಅಮೃತ ರೈತ ಉತ್ಪಾದಕ ಕಂಪನಿಯ‌ ಸಂಯುಕ್ತಾಶ್ರಯದಲ್ಲಿ ಪ್ರಧಾನ ತರಬೇತಿ ಕಾರ್ಯಕ್ರಮ ಹಾಗೂ ತರಳಬಾಳು ಅಮೃತ ರೈತ ಉತ್ಪಾದಕ ಕಂಪನಿಯ ಕಚೇರಿಯ ಉದ್ಘಾಟನೆ ಮಾಡಲಾಯಿತು.

ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ತಜ್ಞ ಬಸವನಗೌಡ ಎಂ ಜಿ ಮಾತನಾಡಿ, ಅಡಿಕೆ ಬೆಲೆ ದಿನದಿಂದ ದಿನಕ್ಕೆ ವಿಸ್ತರಣೆ ಹೆಚ್ಚಾಗುತ್ತಿದ್ದು, ಅದೇ ರೀತಿ ಅಡಿಕೆಗೆ ಬರುವ ಕೀಟ ಮತ್ತು ರೋಗಗಳ ಬಾಧೆ ಸಹ ಹೆಚ್ಚಾಗುತ್ತಿದೆ. ಸಮರ್ಪಕವಾದ ನೀರು ನಿರ್ವಹಣೆ ಹಾಗೂ ಪೋಷಕಾಂಶಗಳ ನಿರ್ವಹಣೆ ಕೈಗೊಂಡರೆ ಅಡಿಕೆ ಇಳುವರಿಯನ್ನು ಹೆಚ್ಚಿಸಬಹುದು ಎಂದರು.

ಬೇಸಾಯ ತಜ್ಞ ಮಲ್ಲಿಕಾರ್ಜುನ ಬಿ. ಓ ಮಾತನಾಡಿ, ರೈತ ಉತ್ಪಾದಕ ಕಂಪನಿಗಳು ಲಾಭವನ್ನು ರೈತರು ಉಪಯೋಗಿಸಿಕೊಂಡು, ಮೌಲ್ಯವರ್ಧನೆ ಕಡೆ ಹೆಚ್ಚು ಗಮನ ಹರಿಸಿದರೆ ಆದಾಯವನ್ನು ದ್ವಿಗುಣ ಮಾಡಬಹುದು ಎಂದರು.

ಕಾರ್ಯಕ್ರಮದಲ್ಲಿ ಕಂಪನಿಯ ಅಧ್ಯಕ್ಷ ಶಿವಕುಮಾರ್ , ಮಾತನಾಡುತ್ತಾ ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ನಮ್ಮ ಕಂಪನಿಯ ಮುಖಾಂತರ ಷೇರುದಾರರಿಗೆ ಸಿಗುವಂತೆ ನಾವು ಮಾಡಬೇಕು ಎಂದರು.ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರು ,  ಜಗದೀಶ್, ಉಪಾಧ್ಯಕ್ಷರು ಹಾಗೂ ಕಂಪನಿಯ ಎಲ್ಲಾ ನಿರ್ದೇಶಕರು, ಷೇರುದಾರರು ಭಾಗವಹಿಸಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *