ಹೈದರಾಬಾದ್: ಪಶುವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳ ಎನ್ ಕೌಂಟರ್ ಸುದ್ದಿ ಕೇಳಿದ ತೆಲಂಗಾಣ ವಿದ್ಯಾರ್ಥಿಗಳು ಬಸ್ ನಲ್ಲಿಯೇ ಕೇಕೆ ಹಾಕಿ ಸಂಭ್ರಮಿಸಿದ್ರು.
#WATCH Hyderabad: Reaction of girl students when news of encounter of the accused in murder and rape of woman veterinarian broke out pic.twitter.com/z238VVDsiC
— ANI (@ANI) December 6, 2019
ತೆಲಂಗಾಣ ಪೊಲೀಸರು ಎನ್ಕೌಂಟರ್ ಶಾಲಾ ವಿದ್ಯಾರ್ಥಿನಿಯರು ಜೋರಾಗಿ ಚೀರುತ್ತ ಹರ್ಷ ವ್ಯಕ್ತ ಡಿಸಿದ್ದಾರೆ. ಬಸ್ನಲ್ಲಿ ತೆಲಂಗಾಣ ಪೊಲೀಸರ ಕರ್ತವ್ಯಕ್ಕೆ ವಿದ್ಯಾರ್ಥಿನಿಯರು ಧನ್ಯವಾದ ಹೇಳಿದ್ದಾರೆ. ಇನ್ನೊಂದೆಡೆ ಸಾರ್ವಜನಿಕರು ಪೊಲೀಸರನ್ನು ಹೆಗಲ ಮೇಲೆ ಎತ್ತಿಕೊಂಡು ಸಂಭ್ರಮಿಸಿದ ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.
#WATCH Hyderabad: People celebrate and cheer for police at the encounter site where the four accused were killed in an encounter earlier today. #Telangana pic.twitter.com/WZjPi0Y3nw
— ANI (@ANI) December 6, 2019
ಪಶುವೈದ್ಯೆ ದಿಶಾ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ರಾಷ್ಟ್ರದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ರಾಷ್ಟದಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿದ್ದವು. ಕೃತ್ಯ ಎಸಗಿದವರ ಗಲ್ಲು ಶಿಕ್ಷೆ ಆಗಬೇಕು ಎಂದು ದೇಶದಾದ್ಯಂತ ಕೂಗು ಜೋರಾಗಿತ್ತು. ಆದ್ರೀಗ ಪೊಲೀಸರೇ ಎನ್ ಕೌಂಟರ್ ನಲ್ಲಿ ಮಾಡಿದ್ದರಿಂದ ದೇಶದಾದ್ಯತ ತೆಲಂಗಾಣ ಪೊಲೀಸರಿಗೆ ಧನ್ಯವಾದ ಹೇಳುತ್ತಿದ್ದಾರೆ. ಅದೇ ರೀತಿ ಬಸ್ ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯರು ಸಹ ಹರ್ಷ ವ್ಯಕ್ತ ಪಡಿಸುತ್ತಿರುವ ವಿಡಿಯೋ ಸಖತ್ ವೈರಲ್ ಆಗ್ತತಿದೆ.
ಹುಬ್ಬಳ್ಳಿ ಮೂಲದ ಪೊಲೀಸ್ ಕಮಿಷನರ್ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡ ಎನ್ಕೌಂಟರ್ ಕಾರ್ಯಾಚರಣೆ ನಡೆಸಿದ್ದು, ಯಾವ ಸ್ಥಳದಲ್ಲಿ ಪಶುವೈದ್ಯೆಯನ್ನು ಸಾಮೂಹಿಕ ಅತ್ಯಾಚಾರ ಎಸಗಿ, ಪೆಟ್ರೋಲ್ ಸುರಿದು ಸುಟ್ಟು ಹಾಕಲಾಗಿತ್ತೋ ಅದೇ ಸ್ಥಳದಲ್ಲಿ ಎನ್ ಕೌಂಟರ್ ಮಾಡಲಾಗಿದೆ.



