ದಾವಣಗೆರೆ: ನಗರದ ರಾಷ್ಟ್ರೀಯ ಹೆದ್ದಾರಿ-48ರ ರಸ್ತೆಯ ಶಾಮನೂರು ಬ್ರಿಡ್ಜ್ ಬಳಿ ಗಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೋಸರು ಬಂಧಿಸಿದ್ದಾರೆ .
ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಆಸೀಪ್ ಎಂಬಾತನ್ನ ತಪಾಸಣೆ ನಡೆಸಲಾಗಿ ಒಣಗಿದ ಕಡ್ಡಿ ಹಾಗೂ ಬೀಜ ಮಿಶ್ರಿತ ಗಾಂಜಾ ಸೊಪ್ಪನ್ನು ಮಾರಾಟ ಮಾಡುವ ಉದ್ದೇಶ ಹೊಂದಿರುವುದನ್ನು ಪತ್ತೆ ಹಚ್ಚಿ ಇಲಾಖಾ ವಶಕ್ಕೆ ಜಪ್ತುಪಡಿಸಿಕೊಂಡು ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿತ ಆಸೀಪ್ ಬಿನ್ ಆಲಿ ಎಂಬ 22 ವರ್ಷದ ಹಿರಿಯೂರು ಪಟ್ಟಣದ ವಾಸಿಯಾದ ಇವರನ್ನು ಅಬಕಾರಿ ಜಂಟಿ ಆಯುಕ್ತರು, (ಜಾರಿ & ತನಿಖೆ) ಹೊಸಪೇಟೆ ವಿಭಾಗ ಇವರ ನಿರ್ದೇಶನದ ಮೇರೆಗೆ ಜೂ.20 ರಂದು ದಾವಣಗೆರೆ ಜಿಲ್ಲೆ ಅಬಕಾರಿ ಉಪ ಆಯುಕ್ತ ಬಿ.ಶಿವಪ್ರಸಾದ್ ಮಾರ್ಗದರ್ಶನದಲ್ಲಿ ದಾವಣಗೆರೆ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ರಾಮನಗೌಡ ಮುದಿಗೌಡರ್ ಇವರ ಸಮಕ್ಷಮದಲ್ಲಿ, ಅಬಕಾರಿ ನಿರೀಕ್ಷಕರು ದಾವಣಗೆರೆ ವಲಯ-1 ವಿನೋದ್ ಕಳಸಪ್ಪಗೋಳ್ ದಾವಣಗೆರೆ ಇವರ ಸಿಬ್ಬಂದಿ ಹಾಗೂ ಪಂಚರೊಂದಿಗೆ ಖಚಿತ ಭಾತ್ಮಿ ಮೇರೆಗೆ ತಪಾಸಣೆ ನಡೆಸಲಾಗಿದೆ.
ಮಾರಾಟ ಮಾಡುವ ಉದ್ದೇಶದಿಂದ ಒಂದು ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರ್ನಲ್ಲಿ ಪೇಪರ್ ಸಮೇತ 229 ಗ್ರಾಂ ಒಣಗಿದ ಕಡ್ಡಿ ಹಾಗೂ ಬೀಜ ಮಿಶ್ರಿತ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡು ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ ಅಂದಾಜು ರೂ.20,000 ಮೌಲ್ಯದ ಪದಾರ್ಥವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತ ಬಿ.ಶಿವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



