ದಾವಣಗೆರೆ: 122 ವರ್ಷಗಳ ಸುಧೀರ್ಘ ಇತಿಹಾಸವಿರುವ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್ ನಿಂದ ಪ್ರತಿ ವರ್ಷದಂತೆ ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷರಾದ ಸಿ.ಆರ್. ವಿರೂಪಾಕ್ಷಪ್ಪ ತಿಳಿಸಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಮುದಾಯದ ಮಕ್ಕಳಿಗೆ ಸಾರ್ವಜನಿಕವಾಗಿ ಕೊಡಮಾಡುವ ವಿದ್ಯಾರ್ಥಿ ವೇತನ ಶೇಕಡವಾರು 85% ರಷ್ಟು ಅಂಕ ಪಡೆದ ಪ್ರತಿಭಾವಂತ ಮಕ್ಕಳು ಅರ್ಜಿ ಸಲ್ಲಿಸಬಹುದು. 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ಪ್ರಥಮ ಮತ್ತು ದ್ವಿತೀಯ ವರ್ಷ ಪಿ.ಯು.ಸಿ., ವ್ಯಾಸಂಗ ಮಾಡುತ್ತಿರುವ ವಿದಾರ್ಥಿ-ವಿದ್ಯಾರ್ಥಿನಿಯರು ಅಂಕಪಟ್ಟಿ ಜೆರಾಕ್ಸ್ ನೊಂದಿಗೆ ಕಾಲೇಜಿನ ಪ್ರವೇಶಕ್ಕೆ ಕಟ್ಟಿದ ಶುಲ್ಕದ ರಶೀದಿಯ ಜೆರಾಕ್ಸ್ ನೊಂದಿಗೆ ಕೊಡುವುದು.
ಹೆಚ್ಚಿನ ಮಾಹಿತಿಗಾಗಿ ಮತ್ತು ಟ್ರಸ್ಟ್ನ ಅಧಿಕೃತ ಮುದ್ರಿತ, ಉಚಿತ ವಿದ್ಯಾರ್ಥಿ ವೇತನ ಕೂಪನ್ಗಾಗಿ ಸಿ.ಆರ್. ವಿರೂಪಾಕ್ಷಪ್ಪ ಅಧ್ಯಕ್ಷರು, ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್, ಚನ್ನಗಿರಿ ರಂಗಪ್ಪ ಗಡಿಯಾರ ಕಂಬದ ಎದುರು, ರೈಲ್ವೆ ಸ್ಟೇಷನ್ ರಸ್ತೆ, ದಾವಣಗೆರೆ-577001. ಇಲ್ಲಿಗೆ ಜುಲೈ 1 ರಿಂದ 10 ರೊಳಗೆ ಮಧ್ಯಾಹ್ನ 12 ರಿಂದ 1 ಸಂಜೆ 5-30 ರಿಂದ 6-30ರ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಭರತ್ ಚನ್ನಗಿರಿ ತಿಳಿಸಿದ್ದಾರೆ. ಕಚೇರಿಗೆ ಬರುವಾಗ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿ ಬರುವುದು. ವಿದ್ಯಾರ್ಥಿ ವೇತನ ಕೂಪನ್ ಕಛೇರಿಗೆ ತಲುಪಿಸುವ ಕೊನೆಯ ಜುಲೈ 31 ಎಂದು ತಿಳಿಸಲಾಗಿದೆ.



