ದಾವಣಗೆರೆ: ಕರ್ತವ್ಯ ಲೋಪ ಹಿನ್ನೆಲೆ ತುರ್ಚಘಟ್ಟದ ನಿರಾಶ್ರಿತರ ಪರಿಹಾರ ಕೇಂದ್ರದ ಎಫ್ ಡಿಎ ನಳನಾ ಅಮಾನತು ಮಾಡಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.
ನಿರಾಶ್ರಿತರ ಕೇಂದ್ರದಲ್ಲಿ ಅಡುಗೆ ಮಾಡುವರಿಗೆ ಸರಿಯಾಗಿ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡುತ್ತಿರಲಿಲ್ಲ. ಇದಲ್ಲದೇ ನಿರಾಶ್ರಿತರ ಕೇಂದ್ರದಲ್ಲಿ ಬೆಳೆದ ತರಕಾರಿ ಹಾಗೂ ಹಾಲನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು ಎಂಬ ಆರೋಪ ಎಫ್ ಡಿಎ ಅಧಿಕಾರಿ ನಳನಾ ಅವರ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.



