Connect with us

Dvgsuddi Kannada | online news portal | Kannada news online

ಮಕ್ಕಳ ಬಿಸಿಯೂಟ ಬೇಳೆ ಅಕ್ರಮ ಮಾರಾಟ ಮಾಡಿ ಸಿಕ್ಕಿ ಬಿದ್ದ ಮುಖ್ಯ ಶಿಕ್ಷಕ;  ಎಫ್ ಐ ಆರ್ ದಾಖಲು

ಪ್ರಮುಖ ಸುದ್ದಿ

ಮಕ್ಕಳ ಬಿಸಿಯೂಟ ಬೇಳೆ ಅಕ್ರಮ ಮಾರಾಟ ಮಾಡಿ ಸಿಕ್ಕಿ ಬಿದ್ದ ಮುಖ್ಯ ಶಿಕ್ಷಕ;  ಎಫ್ ಐ ಆರ್ ದಾಖಲು

 ಮಂಡ್ಯ: ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಯೂಟಕ್ಕೆ ಸರ್ಕಾರ ನೀಡುವ  ಉಚಿತ ತೊಗರಿ ಬೇಳೆಯನ್ನು ಮುಖ್ಯ ಶಿಕ್ಷಕನೊಬ್ಬ ಅಕ್ರಮವಾಗಿ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದಾನೆ . ಶಿಕ್ಷಕ ಬೇಳೆ ಕದಿಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತೊಗರಿ ಬೇಳೆ ಮೂಟೆಗಳನ್ನು ಆಟೋದಲ್ಲಿ ತುಂಬಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೀಗ ಈ ಶಕ್ಷಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಜಿಲ್ಲೆ ಮಳವಳ್ಳಿ ತಾಲೂಕಿನ ಮಾರೆಗೌಡನ ಹಳ್ಳಿಯಲ್ಲಿ  ಈ ಘಟನೆ ನಡೆದಿದೆ. ಶಾಲೆಯ ಮುಖ್ಯ ಶಿಕ್ಷಕ ಕಾಳ ರಾಜೇಗೌಡ ಬೇಳೆ ಕಳ್ಳತನ ಮಾಡಿದ್ದಾರೆ. ಶಾಲೆಯಿಂದ ಬಿಸಿಯೂಟದ ಎರಡು ಮೂಟೆ ಬೇಳೆ ಕದ್ದು ಅಂಗಡಿಗೆ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ಶಾಲೆಯಲ್ಲಿ ಕದ್ದ ಬೇಳೆಯನ್ನು ಆಟೋದಲ್ಲಿ ಹಲಗೂರಿನ ಅಂಗಡಿಗೆ ಸಾಗಿಸುತ್ತಿದ್ದ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ನೋಡಿದ ಜನರಿಂದ ಕಳ್ಳ ಶಿಕ್ಷಕನ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಮುಖ್ಯ ಶಿಕ್ಷಕನಿಗೆ ನೋಟೀಸ್ ನೀಡಲಾಗಿದೆ. ಈ ಪ್ರಕರಣ ಹಲಗೂರು ಪೊಲೀಸ್ ಠಾಣೆಯಲ್ಲಿ‌ ದಾಖಲಾಗಿದ್ದು ಶಿಕ್ಷಕನ ವಿರುದ್ಧ 403 ಮತ್ತು 409ರ ಅಡಿಯಲ್ಲಿ FIR ದಾಖಲಿಸಲಾಗಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top