ಮಂಡ್ಯ: ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಯೂಟಕ್ಕೆ ಸರ್ಕಾರ ನೀಡುವ ಉಚಿತ ತೊಗರಿ ಬೇಳೆಯನ್ನು ಮುಖ್ಯ ಶಿಕ್ಷಕನೊಬ್ಬ ಅಕ್ರಮವಾಗಿ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದಾನೆ . ಶಿಕ್ಷಕ ಬೇಳೆ ಕದಿಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತೊಗರಿ ಬೇಳೆ ಮೂಟೆಗಳನ್ನು ಆಟೋದಲ್ಲಿ ತುಂಬಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೀಗ ಈ ಶಕ್ಷಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಜಿಲ್ಲೆ ಮಳವಳ್ಳಿ ತಾಲೂಕಿನ ಮಾರೆಗೌಡನ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಮುಖ್ಯ ಶಿಕ್ಷಕ ಕಾಳ ರಾಜೇಗೌಡ ಬೇಳೆ ಕಳ್ಳತನ ಮಾಡಿದ್ದಾರೆ. ಶಾಲೆಯಿಂದ ಬಿಸಿಯೂಟದ ಎರಡು ಮೂಟೆ ಬೇಳೆ ಕದ್ದು ಅಂಗಡಿಗೆ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ.
#Mandya #Karnataka FIR against govt school teacher Rajegowda for selling Toor Dal meant 4 school children. FIR under 403 & 409 regd. After a video of Toor dal sacks being loaded on an auto went viral on social media. Authorities initiated action against him. pic.twitter.com/jEcGoO58Qz
— Imran Khan (@KeypadGuerilla) July 1, 2022
ಶಾಲೆಯಲ್ಲಿ ಕದ್ದ ಬೇಳೆಯನ್ನು ಆಟೋದಲ್ಲಿ ಹಲಗೂರಿನ ಅಂಗಡಿಗೆ ಸಾಗಿಸುತ್ತಿದ್ದ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ನೋಡಿದ ಜನರಿಂದ ಕಳ್ಳ ಶಿಕ್ಷಕನ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಮುಖ್ಯ ಶಿಕ್ಷಕನಿಗೆ ನೋಟೀಸ್ ನೀಡಲಾಗಿದೆ. ಈ ಪ್ರಕರಣ ಹಲಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಶಿಕ್ಷಕನ ವಿರುದ್ಧ 403 ಮತ್ತು 409ರ ಅಡಿಯಲ್ಲಿ FIR ದಾಖಲಿಸಲಾಗಿದೆ.



